AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರ ಮನೆಗೆ ನೀರು ಬಿಡೋದಿಲ್ಲ..​ಸ್ಟೇಟಸ್​ ಹಾಕಿದ್ದ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷನ ಮೇಲೆ ಹಲ್ಲೆ

ಬಿಜೆಪಿಯವರ ಮನೆಗೆ ನೀರು ಬಿಡೋದಿಲ್ಲ..​ಸ್ಟೇಟಸ್​ ಹಾಕಿದ್ದ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷನ ಮೇಲೆ ಹಲ್ಲೆ

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jun 25, 2025 | 4:33 PM

Share

ಕಲಬುರಗಿ ಜಿಲ್ಲೆಯ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಅವರ ಮೇಲೆ ಕಾಂಗ್ರೆಸ್​ ಕಾರ್ಯಕರ್ತ ಹಲ್ಲೆ ಮಾಡಿದ್ದಾನೆ. ಕಾಂಗ್ರೆಸ್ ಕಾರ್ಯಕರ್ತ ಪೃಥ್ವಿರಾಜ್ ಹಲ್ಲೆ ಮಾಡಿದ ಆರೋಪಿ. ಈ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ, ಜೂನ್​ 24: ಬಿಜೆಪಿಯವರ (BJP) ಮನೆಗೆ ನೀರು ಬಿಡುವುದಿಲ್ಲ ಎಂದು ಸ್ಟೇಟಸ್​ ಹಾಕಿದ್ದಕ್ಕೆ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಕಾಂಗ್ರೆಸ್​ (Congress) ಕಾರ್ಯಕರ್ತ ಹಲ್ಲೆ ಮಾಡಿದ್ದಾನೆ. ವಾಡಿ ಪುರಸಭೆ ಮಾಜಿ ಸದಸ್ಯ, ಕೈ ಕಾರ್ಯಕರ್ತ ಪೃಥ್ವಿರಾಜ್ ಹಲ್ಲೆ ಮಾಡಿದ ಆರೋಪಿ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಘಟನೆ ನಡೆದಿದೆ.

ವಾಡಿ ಪುರಸಭೆಯಿಂದ ಕಾಂಗ್ರೆಸ್​ನವರ ಮನೆಗೆ ಮಾತ್ರ ನೀರು ಬಿಡುತ್ತಾರೆ. ಬಿಜೆಪಿಯವರ ಮನೆಗೆ ನೀರು ಬಿಡಲ್ಲ ಎಂದು ಈರಣ್ಣ ಯಾರಿ ವಾಟ್ಸ್​ಆ್ಯಪ್​​ ಸ್ಟೇಟಸ್​ ಹಾಕಿದ್ದರು. ಈ ಕಾರಣಕ್ಕೆ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More