AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರ ಮನೆಗೆ ನೀರು ಬಿಡೋದಿಲ್ಲ..​ಸ್ಟೇಟಸ್​ ಹಾಕಿದ್ದ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷನ ಮೇಲೆ ಹಲ್ಲೆ

ಬಿಜೆಪಿಯವರ ಮನೆಗೆ ನೀರು ಬಿಡೋದಿಲ್ಲ..​ಸ್ಟೇಟಸ್​ ಹಾಕಿದ್ದ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷನ ಮೇಲೆ ಹಲ್ಲೆ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ|

Updated on: Jun 25, 2025 | 4:33 PM

Share

ಕಲಬುರಗಿ ಜಿಲ್ಲೆಯ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಅವರ ಮೇಲೆ ಕಾಂಗ್ರೆಸ್​ ಕಾರ್ಯಕರ್ತ ಹಲ್ಲೆ ಮಾಡಿದ್ದಾನೆ. ಕಾಂಗ್ರೆಸ್ ಕಾರ್ಯಕರ್ತ ಪೃಥ್ವಿರಾಜ್ ಹಲ್ಲೆ ಮಾಡಿದ ಆರೋಪಿ. ಈ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ, ಜೂನ್​ 24: ಬಿಜೆಪಿಯವರ (BJP) ಮನೆಗೆ ನೀರು ಬಿಡುವುದಿಲ್ಲ ಎಂದು ಸ್ಟೇಟಸ್​ ಹಾಕಿದ್ದಕ್ಕೆ ವಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಕಾಂಗ್ರೆಸ್​ (Congress) ಕಾರ್ಯಕರ್ತ ಹಲ್ಲೆ ಮಾಡಿದ್ದಾನೆ. ವಾಡಿ ಪುರಸಭೆ ಮಾಜಿ ಸದಸ್ಯ, ಕೈ ಕಾರ್ಯಕರ್ತ ಪೃಥ್ವಿರಾಜ್ ಹಲ್ಲೆ ಮಾಡಿದ ಆರೋಪಿ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಘಟನೆ ನಡೆದಿದೆ.

ವಾಡಿ ಪುರಸಭೆಯಿಂದ ಕಾಂಗ್ರೆಸ್​ನವರ ಮನೆಗೆ ಮಾತ್ರ ನೀರು ಬಿಡುತ್ತಾರೆ. ಬಿಜೆಪಿಯವರ ಮನೆಗೆ ನೀರು ಬಿಡಲ್ಲ ಎಂದು ಈರಣ್ಣ ಯಾರಿ ವಾಟ್ಸ್​ಆ್ಯಪ್​​ ಸ್ಟೇಟಸ್​ ಹಾಕಿದ್ದರು. ಈ ಕಾರಣಕ್ಕೆ ಅಧ್ಯಕ್ಷ ಈರಣ್ಣ ಯಾರಿ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ