ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವ ಶರಣಪ್ರಕಾಶ್ ಪಾಟೀಲ್​​​​ಗೆ ಕಾರ್ಯಕರ್ತ ಕ್ಲಾಸ್

Edited By:

Updated on: May 03, 2025 | 4:30 PM

ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ.

ರಾಯಚೂರು, (ಮೇ 03): ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ. ಬಳಿಕ ಸಚಿವರು, ನೀವ್ಯಾರು ಕೇಳೋಕೆ ಎಂದು ಗರಂ ಆಗಿದ್ದಾರೆ. ಆಗ ವ್ಯಕ್ತಿ ನಾನು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಎಂದು ಉತ್ತರಿಸಿದ್ದಾನೆ. ನಂತರ ಶರಣಪ್ರಕಾಶ್ ಪಾಟೀಲ್, ನಾನ್​ಸೆನ್ಸ್​ ರೀತಿ ಮಾತನಾಡಬೇಡ ಎಂದು ಹೇಳಿ ತೆರಳಿದರು.

Published on: May 03, 2025 04:25 PM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More