ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವ ಶರಣಪ್ರಕಾಶ್ ಪಾಟೀಲ್ಗೆ ಕಾರ್ಯಕರ್ತ ಕ್ಲಾಸ್
ಸಚಿವ ಶರಣ ಪ್ರಕಾಶ್ ಪಾಟೀಲ್ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ.
ರಾಯಚೂರು, (ಮೇ 03): ಸಚಿವ ಶರಣ ಪ್ರಕಾಶ್ ಪಾಟೀಲ್ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದ್ದಾನೆ. ಬಳಿಕ ಸಚಿವರು, ನೀವ್ಯಾರು ಕೇಳೋಕೆ ಎಂದು ಗರಂ ಆಗಿದ್ದಾರೆ. ಆಗ ವ್ಯಕ್ತಿ ನಾನು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಎಂದು ಉತ್ತರಿಸಿದ್ದಾನೆ. ನಂತರ ಶರಣಪ್ರಕಾಶ್ ಪಾಟೀಲ್, ನಾನ್ಸೆನ್ಸ್ ರೀತಿ ಮಾತನಾಡಬೇಡ ಎಂದು ಹೇಳಿ ತೆರಳಿದರು.
Published on: May 03, 2025 04:25 PM
Loading...
Unable to load recommendations.
Follow Us