ಒಡಿಶಾದಲ್ಲಿ ಪೊಲೀಸರು- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ; ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಬಳಕೆ

Updated on: Mar 27, 2025 | 5:21 PM

ಸದನದ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ 14 ಪಕ್ಷದ ಶಾಸಕರನ್ನು ಅಮಾನತುಗೊಳಿಸಿದ ನಂತರ ಒಡಿಶಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಪ್ರತಿಭಟನೆಗಳು ಹೆಚ್ಚುತ್ತಿದ್ದಂತೆ ಜಲಫಿರಂಗಿಗಳನ್ನು ಬಳಸಲಾಯಿತು. ಸ್ಪೀಕರ್ ಅವರ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಸಣ್ಣ ರ್ಯಾಲಿಗಳಲ್ಲಿ ಭಾಗವಹಿಸಿದರು, ಕಂಸಾಳೆ ಬಾರಿಸಿದರು ಮತ್ತು ಫಲಕಗಳನ್ನು ಪ್ರದರ್ಶಿಸಿದರು.

ಪುರಿ, ಮಾರ್ಚ್2: ಒಡಿಶಾದಲ್ಲಿ ಇಂದು ಕಾಂಗ್ರೆಸ್ ಪಕ್ಷದ 14 ಶಾಸಕರ ಅಮಾನತು ಮತ್ತು ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧವನ್ನು ವಿರೋಧಿಸಿ ವಿಧಾನಸಭೆಯತ್ತ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಯಿತು. ಈ ವಾರದ ಆರಂಭದಲ್ಲಿ ಸದನದ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸ್ಪೀಕರ್ 14 ಶಾಸಕರನ್ನು ಅಮಾನತುಗೊಳಿಸಿದ್ದರು. ಪ್ರತಿಭಟನಾ ಸ್ಥಳದಿಂದ ಬಂದ ದೃಶ್ಯಗಳು ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಗಳನ್ನು ಎಸೆದು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸಿವೆ. ರಕ್ಷಣಾತ್ಮಕ ಜಾಕೆಟ್‌ಗಳು, ಹೆಲ್ಮೆಟ್‌ಗಳು ಮತ್ತು ಲಾಠಿಗಳನ್ನು ಧರಿಸಿದ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಆದರೆ, ಪ್ರತಿಭಟನಾಕಾರರು ಪಟ್ಟುಬಿಡದೆ ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ಗುಂಪನ್ನು ಚದುರಿಸಲು ಜಲಫಿರಂಗಿಗಳನ್ನು ಬಳಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More