AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ MLC ಶರಣಗೌಡ ಬಯ್ಯಾಪುರ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ

ರಾಯಚೂರು ಜಿಲ್ಲೆಯ ಲಿಂಗಸುಗೂರು ಕಾಂಗ್ರೆಸ್​​ ನಲ್ಲಿ ಬಣಬಡಿದಾಟ ತಾರಕಕ್ಕೇರಿದೆ. ಮಾಜಿ‌ ಶಾಸಕ ಡಿ.ಎಸ್.ಹೂಲಿಗೇರಿ ಹಾಗೂ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಬಣ ರಾಜಕೀಯ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಕಾರು ಅಡ್ಡಗಟ್ಟಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಭೀಮೇಶ್​​ ಪೂಜಾರ್
| Edited By: |

Updated on: Aug 05, 2025 | 5:28 PM

Share

ರಾಯಚೂರು, (ಆಗಸ್ಟ್ 05): ರಾಯಚೂರು ಜಿಲ್ಲೆಯ ಲಿಂಗಸುಗೂರು ಕಾಂಗ್ರೆಸ್​​ ನಲ್ಲಿ ಬಣಬಡಿದಾಟ ತಾರಕಕ್ಕೇರಿದೆ. ಮಾಜಿ‌ ಶಾಸಕ ಡಿ.ಎಸ್.ಹೂಲಿಗೇರಿ ಹಾಗೂ ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಬಣ ರಾಜಕೀಯ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಕಾರು ಅಡ್ಡಗಟ್ಟಿ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಹೌದು.. ವಿಧಾನಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ನಡೆದಿದೆ. ಗೋವಿಂದ ನಾಯಕ್ ಯಾರೂ ಅಂತಾ ಗೊತ್ತಿಲ್ಲ ಎಂದು ಶರಣಗೌಡ ಬಯ್ಯಾಪುರ ಮಾಧ್ಯಮ ಹೇಳಿಕೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದ್ದು, ಇಂದು (ಆಗಸ್ಟ್ 05) ಶರಣಗೌಡ ಬಯ್ಯಾಪುರ ಕಾರನ್ನು ಅಡ್ಡಗಟ್ಟಿ ಅವರ ಆಪ್ತನಿಗೆ ಥಳಿಸಿದ್ದಾರೆ. ಅಲ್ಲದೇ ಶರಣಗೌಡ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಲಿಂಗಸಗೂರು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ನಾಯಕ್ ಯಾರೂ ಅಂತ ಗೊತ್ತಿಲ್ಲ ಎಂದು ಎಂಎಲ್ ಸಿ ಬಯ್ಯಾಪೂರ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಮಾಜಿ ಶಾಸಕ  ಡಿಎಸ್ ಹೂಲಗೇರಿ ಬೆಂಬಲಿಗರು, ಇಂದು ಗೊರೇಬಾಳ ಗ್ರಾಮದಲ್ಲಿ ಶರಣಗೌಡ ಬಯ್ಯಾಪೂರ ಕಾರು ಅಡ್ಡಗಟ್ಟಿದ್ದಾರೆ. ಅಲ್ಲದೇ ಇದೇ ವೇಳೆ ಶರಣಗವಡ ಬಯ್ಯಾಪುರ ಆಪ್ತನಿಗೆ ಥಳಿಸಿದ್ದಾರೆ.

Follow Us
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ