AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ

ರಮೇಶ್ ಬಿ. ಜವಳಗೇರಾ
|

Updated on: Jan 05, 2026 | 3:37 PM

Share

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ ಕುರ್ಚಿ ತೂರಿದ್ದಾರೆ. ಈ ವೇಳೆ ಅಂಗರಕ್ಷಕರು ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಅನಾಹುತ ತಪ್ಪಿದಂತಾಗಿದೆ.

ಕೊಪ್ಪಳ, (ಜನವರಿ 05): ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ (Minister V Somanna )ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ (Koppal) ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ ಕುರ್ಚಿ ತೂರಿದ್ದಾರೆ. ಈ ವೇಳೆ ಅಂಗರಕ್ಷಕರು ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು!

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More