Channapatna By Election Result: ಯೋಗೇಶ್ವರ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಕುಣಿದು ಕುಪ್ಪಳಿಸಿದ ಕಾಂಗ್ರೆಸ್ ಬೆಂಬಲಿಗರು

ಅರುಣ್​ ಕುಮಾರ್​ ಬೆಳ್ಳಿ

Updated on: Nov 23, 2024 | 11:17 AM

Channapatna By Election Result: ರಾಜ್ಯದಲ್ಲಿ ಚನ್ನಪಟ್ಟಣ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು ನಿಜವಾದರೂ ರಾಜ್ಯದ ಎಲ್ಲರ ಕಣ್ಣು ಕುಮಾರಸ್ವಾಮಿ ತೆರವು ಮಾಡಿದ ಕ್ಷೇತ್ರದ ಮೇಲೆ ನೆಟ್ಟಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವಗೌಡರ ಕುಟುಂಬ ಮತ್ತ್ತು ಡಿಕೆ ಸಹೋದರರು ಈ ಉಪ ಚುನಾವಣೆಯನ್ನು ಪ್ರತಿಷ್ಠೆಯ ಪ್ರತೀಕವೆಂದು ಪರಿಗಣಿಸಿದ್ದಾರೆ.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 10ನೇ ಸುತ್ತಿನ ಮತಎಣಿಕೆಯ ನಂತರ 18,000ಕ್ಕಿಂತ ಹೆಚ್ಚು ಮತಗಳ ಅಂತರ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಕೇಂದ್ರದ ಮುಂದೆ ನೆರೆದಿರುವ ಯೋಗೇಶ್ವರ್ ಮತ್ತು ಕಾಂಗ್ರೆಸ್ ಬೆಂಬಲಿಗರು ಕುಣಿದು ಕುಪ್ಪಳಿಸುತ್ತಾ ಈಗಲೇ ಸಂಭ್ರಮ ಆಚರಿಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಲೀಡ್ ಉಲ್ಬಣಿಸುತ್ತಿರುವುದರಿಂದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮೌನವಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Channapatna By Election Result: ಪ್ರಚಾರ ಅರಂಭಿಸಿದ ದಿನದಿಂದ ಚನ್ನಪಟ್ಟಣ ಜನ ನಿಖಿಲ್​ನನ್ನು ಆಶೀರ್ವದಿಸುವ ನಂಬಿಕೆ ಇದೆ: ಕುಮಾರಸ್ವಾಮಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.