Jog waterfalls: ಧುಮ್ಮಿಕ್ಕುತ್ತಿರುವ ಜೋಗದ ಸೊಬಗು ಆಸ್ವಾದಿಸುವಾಗ ಕವಿ ನಿಸಾರ್ ಅಹಮದ್​ರ ನಿತ್ಯೋತ್ಸವ ಕವನ ನೆನಪಾದರೆ ಆಶ್ಚರ್ಯವಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 10, 2023 | 10:38 AM

ಜನ ಜೋಗದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು, ಅದರ ಸಾನಿಧ್ಯದಲ್ಲಿ ನಿಂತು ಪರವಶರಾಗಲು ಗುಂಪುಗಳಲ್ಲಿ ಆಗಮಿಸುತ್ತಿದ್ದಾರೆ.

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳಿಕಿನಲ್ಲಿ,
ಸಹ್ಯಾದ್ರಿಯ ಲೋಹದದಿ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯಿ ನಿನಗೆ ನಿತ್ಯೋತ್ಸವ ನಿನಗೆ..
ಉತ್ತರ ಕನ್ನಡ:  ಜೋಗದ ಸೊಬಗನ್ನು ಕವಿ ಕೆಎಸ್ ನಿಸಾರ್ ಅಹಮದ್ ಅವರಿಗಿಂತ ಚೆನ್ನಾಗಿ ಯಾರು ವರ್ಣಿಸಿಯಾರು? ಮಲೆನಾಡ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ಮೈದುಂಬಿಕೊಂಡು ಧುಮ್ಮಿಕ್ಕುತ್ತಿದೆ. ಇಲ್ಲಿನ ದೃಶ್ಯ ಈಗ ರುದ್ರ ರಮಣೀಯ. ಹಾಲಿನ ನೊರೆಯಂತೆ ಧುಮ್ಮಿಕ್ಕಿತ್ತಿರುವ ನೀರು, ಸುರಿಯುವ ತುಂಗೆ ಸೃಷ್ಟಿಸುವ ಮಂಜಿನ ದಟ್ಟ ಹೊಗೆ ಇದನ್ನೆಲ್ಲ ಕಣ್ಣಾರೆ ನೋಡೋದೆ ಚಂದ ಮಾರಾಯ್ರೇ. ಜನ ಜೋಗದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು, ಅದರ ಸಾನಿಧ್ಯದಲ್ಲಿ ನಿಂತು ಪರವಶರಾಗಲು ಗುಂಪುಗಳಲ್ಲಿ ಆಗಮಿಸುತ್ತಿದ್ದಾರೆ. ಆಗಸದಿಂದ ವರುಣ ಸುರಿಯುತ್ತಿದ್ದರೂ ಪ್ರಕೃತಿ ಆರಾಧಕರಿಗೆ ಅದರ ಪರಿವೆ ಇಲ್ಲ. ಶನಿವಾರ ಮತ್ತು ರವಿವಾರ ಈ ಪ್ರದೇಶ ಗಿಜಿಗುಡುತಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.