ದರ್ಶನ್ ಕುಟುಂಬ ವಿಶೇಷವಾಗಿ ಪತ್ನಿ ವಿಜಯಲಕ್ಷ್ಮಿ ಜೊತೆ ನಿರಂತರ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್

ಲೋಕಸಭಾ ಚುನವಣೆಗೆ ಮೊದಲು ಸುಮಲತಾ ಅಂಬರೀಶ್ ಬಿಜೆಪಿ ಸೇರಿದ್ದು ಪ್ರಾಯಶಃ ದರ್ಶನ್ ಗೆ ಇಷ್ಟವಾಗಿರಲಿಲ್ಲ. ಅವರು ಬಿಜೆಪಿ ಸೇರಿದಾಗ್ಯೂ ಲೋಕಸಭಾ ಚುನಾವಣೆಯಲ್ಲಿ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಪರ ಪ್ರಚಾರ ಮಾಡಿದ್ದರು. ಸುಮಲತಾ ಯಾರ ಪರವೂ ಪ್ರಚಾರಕ್ಕಿಳಿದಿರಲಿಲ್ಲ.

ದರ್ಶನ್ ಕುಟುಂಬ ವಿಶೇಷವಾಗಿ ಪತ್ನಿ ವಿಜಯಲಕ್ಷ್ಮಿ ಜೊತೆ ನಿರಂತರ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
|

Updated on: Jul 04, 2024 | 6:56 PM

ಬೆಂಗಳೂರು: ಚಿತ್ರನಟ ದರ್ಶನ್ ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಒಬ್ಬ ತಾಯಿಯ ಹಾಗೆ. ಸುಮಲತಾ ಜೊತೆ ಇರುವಾಗ ದರ್ಶನ್, ಸುಮಮ್ಮ ಸುಮಮ್ಮ ಅನ್ನುತ್ತ ಚಿಕ್ಕ ಮಗುವಿನಂತೆ ಹಿಂದೆ ಸುತ್ತುತ್ತಿರುತ್ತಾರೆ. ಸುಮಲತಾ, ತಮ್ಮ ಮಾನಸ ಪುತ್ರ ಜೈಲು ಸೇರಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ಹೋಗಿದ್ದು ಸಹಜವಾಗೇ ಅಚ್ಚರಿ ಹುಟ್ಟಿಸಿತ್ತು, ಇವತ್ತು ಬೆಂಗಳೂರಲ್ಲಿ ಮೌನ ಮುರಿದ ಸುಮಲತಾ, ಕಾನೂನು ವ್ಯವಸ್ಥೆ ತನ್ನದೇ ಆದ ಪ್ರಕ್ರಿಯೆ ಹೊಂದಿರುತ್ತದೆ ಮತ್ತು ಅದು ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತದೆ. ಅದರ ಬಗ್ಗೆ ಕಾಮೆಂಟ್ ಮಾಡುವುದು ಸರಿಯಲ್ಲ. ಈಗ ತಾನು ಏನೇ ಹೇಳಿದರೂ ಆದು ವೈಯಕ್ತಿಕವಾದದ್ದು, ಪಕ್ಷದ ವಿಚಾರ ಉದ್ಭವಿಸಲ್ಲ, ಸದ್ಯದ ಪರಿಸ್ಥಿಯಲ್ಲಿ ದರ್ಶನ್ ತಾಯಿ, ತಮ್ಮ ಮತ್ತು ಪತ್ನಿ ವಿಜಯಲಕ್ಷ್ಮಿ ಮಾಧ್ಯಮಗಳಿಗೆ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ, ಅದರೆ ತಾವು ಕುಟುಂಬದ ಎಲ್ಲ ಸದಸ್ಯರೊಂದಿಗೆ ಅದರಲ್ಲ್ಲೂ ವಿಶೇಷವಾಗಿ ವಿಜಯಲಕ್ಷ್ಮಿಯೊಂದಿಗೆ ಸತತವಾಗಿ ಸಂಪರ್ಕದಲ್ಲಿದ್ದೇನೆ ಎಂದು ಸುಮಲತಾ ಹೇಳಿದರು. ತಮ್ಮ ಮೌನವನ್ನು ಬೇರೆ ರೀತಿ ಬಿಂಬಿಸುವ ಪ್ರಯತ್ನಗಳು ನಡೆದಿವೆ, ಇದು ಸಾರ್ವಜನಿಕವಾಗಿ ಹೇಳಿಕೆ ನೀಡುವ ವಿಷಯವಲ್ಲ, ಅಭಿಮಾನಿಗಳಲ್ಲೂ ಗೊಂದಲವಿದೆ, ಈ ಹಿನ್ನೆಲೆಯಲ್ಲಿ ಸ್ಪಷ್ಟತೆ ನೀಡೋಣ ಅಂತ ಇವತ್ತು ಮಾಧ್ಯಮಗಳ ಜತೆ ಮಾತಾಡಿದ್ದೇನೆ ಎಂದು ಸುಮಲತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಹಿ ಸುದ್ದಿ ಕೊಡಲಿದ್ದಾರಾ ಮಗ-ಸೊಸೆ: ಸುಮಲತಾ ಅಂಬರೀಶ್ ಹೇಳಿದ್ದು ಹೀಗೆ

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್