Non Veg Food Row; ಮಾಂಸ ತಿನ್ನೋದು, ದೇವಸ್ಥಾನಕ್ಕೆ ಹೋಗೋದು ಚರ್ಚೆಯ ವಿಷಯಗಳೇ ಅಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2023 | 3:41 PM

ಮಾಂಸ ತಿನ್ನುವುದು, ತಿನ್ನದಿರುವುದು, ಮಾಂಸದೂಟ ತಿಂದು ದೇವಸ್ಥಾನಕ್ಕೆ ಹೋಗುವುದು ಚರ್ಚೆಯ ವಿಷಯಗಳೇ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆ: ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ಗೊತ್ತಾದ ಬಳಿಕ ಸಿದ್ದರಾಮಯ್ಯ (CT Ravi) ಅದನ್ನು ಉಗ್ರವಾಗಿ ಖಂಡಿಸುತ್ತಾರೆ, ರವಿಯವರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಅಂತ ಭಾವಿಸಿದವರಿಗೆ ನಿರಾಶೆ ಎದುರಾಗಿದೆ. ಇಂದು ಬಾಗಲಕೋಟೆಯ (Bagalkot) ಹುನುಗುಂದದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಾದಾಮಿ ಶಾಸಕರು, ಅಸಲಿಗೆ ಬಿಜೆಪಿ ನಾಯಕರಿಗೆ ಸ್ಪಷ್ಟವಾದ ವಿಚಾರಧಾರೆಯೇ ಇಲ್ಲ. ಮಾಂಸ ತಿನ್ನುವುದು, ತಿನ್ನದಿರುವುದು, ಮಾಂಸದೂಟ ತಿಂದು ದೇವಸ್ಥಾನಕ್ಕೆ ಹೋಗುವುದು ಚರ್ಚೆಯ ವಿಷಯಗಳೇ ಅಲ್ಲ, ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.