Karnataka Assembly Polls; ಕೊರಟಗೆರೆಯಿಂದ ಮಾತ್ರ ಸ್ಪರ್ಧಿಸುತ್ತಿದ್ದೇನೆ, 2-ಕ್ಷೇತ್ರ ವದಂತಿ ಹೇಗೆ ಹುಟ್ಟಿತೋ ಗೊತ್ತಿಲ್ಲ: ಜಿ ಪರಮೇಶ್ವರ, ಶಾಸಕರು

Updated on: Apr 08, 2023 | 4:05 PM

ಹೈಕಮಾಂಡ್ ತನಗೆ ಕೊರಟೆಗೆರೆಯಿಂದ ಸ್ಪರ್ಧಿಸಲು ಈಗಾಗಲೇ ಟಿಕೆಟ್ ನೀಡಿದೆ, ತಾನು ಸಂತೃಪ್ತನಾಗಿರುವುದಾಗಿ ಪರಮೇಶ್ವರ್ ಹೇಳಿದರು.

ತುಮಕೂರು: ಹಿರಿಯ ಕಾಂಗ್ರೆಸ್ ನಾಯಕ ಜಿ ಪರಮೇಶ್ವರ (G Parameshwara) ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ವದಂತಿಯನ್ನು ತಳ್ಳಿಹಾಕಿದ್ದಾರೆ. ತುಮಕೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಉಪಮುಖ್ಯಮಂತ್ರಿ, ತಾನ್ಯಾವತ್ತೂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ಮಾತಾಡಿಲ್ಲ, ಅದರ ಅವಶ್ಯಕತೆಯೂ ತನಗಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಕೊರಟೆಗೆರೆಯ (Koratagere) ಜನ ತನ್ನನ್ನು ಬಹಳ ಪ್ರೀತಿಯಿಂದ ನೋಡಿಕೊಂಡಿದ್ದಾರೆ, ಎರಡೆರಡು ಬಾರಿ ತನ್ನನ್ನು ಗೆಲ್ಲಿಸಿದ್ದಾರೆ. ತಾನು ಅವರನ್ನು ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸದು ಎಂದು ಪರಮೇಶ್ವರ ಹೇಳಿದರು. ಹೈಕಮಾಂಡ್ (high command) ತನಗೆ ಕೊರಟೆಗೆರೆಯಿಂದ ಸ್ಪರ್ಧಿಸಲು ಈಗಾಗಲೇ ಟಿಕೆಟ್ ನೀಡಿದೆ, ತಾನು ಸಂತೃಪ್ತನಾಗಿರುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 08, 2023 04:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More