ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

| Updated By: ವಿವೇಕ ಬಿರಾದಾರ

Updated on: Sep 22, 2023 | 6:49 AM

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ ಎರಡು ಕೋಮಿನ ಗುಂಪು ನಡುವೆ ವಾಗ್ವಾದ ನಡೆದಿರುವ ಘಟನೆ ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ಪ್ರಾರ್ಥನಾ ಮಂದಿರದ ಬಳಿ ನಡೆದಿದೆ.

ಶಿವಮೊಗ್ಗ: ಕೇಸರಿ ಪಡೆ ಗಣೇಶ ವಿಸರ್ಜನೆ (Ganesha Visarjane) ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ ಎರಡು ಕೋಮಿನ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗದ (Shivamogga) ಟ್ಯಾಂಕ್ ಮೊಹಲ್ಲಾ ಪ್ರಾರ್ಥನಾ ಮಂದಿರದ ಬಳಿ ಘಟನೆ ನಡೆದಿದೆ. ಎರಡು ಕೋಮಿನ ಗುಂಪು ನಡುವೆ ಮಾತಿನ ಚಕಮಕಿ ಶುರುವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಸ್‌ಪಿ ಮಿಥುನ್ ಕುಮಾರ್ ಪರಿಸ್ಥಿತಿ ತಿಳಿಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Published On - 6:43 am, Fri, 22 September 23

Follow us on