ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸರ್ಪ್ರೈಸ್ ಭೇಟಿ ನೀಡಿದ ಸಹಕಾರ ಸಚಿವ ಅಲ್ಲಿನ ಅವ್ಯವಸ್ಥೆ ಕಂಡು ವೈದ್ಯರಿಗೆ ತರಾಟೆ

Updated on: Aug 05, 2023 | 1:54 PM

ಕಳೆದ ಬಾರಿಯ ಸಭೆಯಲ್ಲಿ ನೀಡಿದ ಸೂಚನೆಗಳನ್ನು ಯಾಕೆ ಪಾಲಿಸಿಲ್ಲ ಎಂದು ಜೊತೆಗಿದ್ದ ಜಿಲ್ಲಾ ವೈದ್ಯಾಧಿಕಾರಿಯನ್ನು ಪ್ರಶ್ನಿಸಿದರು. ಚಿಕಿತ್ಸೆಗೆಂದು ಬಂದಿದ್ದ ಜನಗಳು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜಣ್ಣಗೆ ವಿವರಿಸಿದರು.

ತುಮಕೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ರಾಹುಲ್ ಗಾಂಧಿ (Rahul Gandhi) ನೀಡಿರುವ ಟಾಸ್ಕ್ ಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಲೋಕ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪ್ರದರ್ಶನ ಉತ್ತಮಗೊಳ್ಳಬೇಕಾದರೆ, ಸಚಿವರು ಮತ್ತು ಶಾಸಕರು ಶ್ರಮವಹಿಸಿ ಕೆಲಸ ಮಾಡಲೇಬೇಕು. ಹಾಗಾಗೇ, ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸುತ್ತಾಡುತ್ತಾ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಇಂದು ತಮ್ಮ ಸ್ವಕ್ಷೇತ್ರ ಮಧುಗಿರಿಯ (Madhugiri) ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ದಂಗಾದರು. ಆಸ್ಪತ್ರೆಯ ಅವರಣದಲ್ಲೇ ಸಣ್ಣ ವ್ಯಾಪಾರಿಗಳು ಗೂಡಂಗಡಿಗಳನ್ನು ಓಪನ್ ಮಾಡಿದ್ದು ಕಂಡು ಸಚಿವರು ವ್ಯಗ್ರರಾದರು. ನೆರೆದಿದ್ದ ಜನರ ಮುಂದೆಯೇ ಅವರು ವೈದ್ಯಾಧಿಕಾರಿ ಡಾ ಮಹೇಶ್ ಸಿಂಗ್ ರನ್ನು (Dr Mahesh Singh) ತರಾಟೆಗೆ ತೆಗೆದುಕೊಂಡರು. ಕಳೆದ ಬಾರಿಯ ಸಭೆಯಲ್ಲಿ ನೀಡಿದ ಸೂಚನೆಗಳನ್ನು ಯಾಕೆ ಪಾಲಿಸಿಲ್ಲ ಎಂದು ಜೊತೆಗಿದ್ದ ಜಿಲ್ಲಾ ವೈದ್ಯಾಧಿಕಾರಿಯನ್ನು ಪ್ರಶ್ನಿಸಿದರು. ಚಿಕಿತ್ಸೆಗೆಂದು ಬಂದಿದ್ದ ಜನಗಳು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜಣ್ಣಗೆ ವಿವರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More