AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ನಮ್ಮನ್ನು ನಾಯಿಗಳಂತೆ ನೋಡ್ತಿದ್ದಾರೆ: ಕೊರೊನಾ ಶಂಕಿತ ಕಂಡಕ್ಟರ್ ಕುಟುಂಬ ಕಣ್ಣೀರು

[lazy-load-videos-and-sticky-control id=”MA1CfPVlYbw”] ಬಾಗಲಕೋಟೆ:ಆಸ್ಪತ್ರೆಗೆ ದಾಖಲಾಗಿ ಐದು ದಿನ ಕಳೆದರೂ ಕೊರೊನಾ ವರದಿ ಬಾರದ ಕಾರಣ, ಶಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ದೊರಕದೆ ನರಳುತ್ತಿರುವ ಪ್ರಸಂಗ ಬಾಗಲಕೋಟೆ ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್ ಡಿಪೋದಲ್ಲಿ ಕಂಡಕ್ಟರಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿದೆ. ಹೀಗಾಗಿ ಅವರನ್ನು ಬಾಗಲಕೋಟೆಯ ಜಿಲ್ಲಾ ಕೊವಿಡ್ ಸೆಂಟರಿಗೆ ಚಿಕಿತ್ಸೆಗೆಂದು ಸೇರಿಸಲಾಗಿದೆ. ಪತ್ನಿ ಹಾಗೂ ಮಗನ ವಿಡಿಯೋ ಆದರೆ ಐದು ದಿನ ಕಳೆದರೂ ಅವರ ಕೊವಿಡ್ ವರದಿ ಇನ್ನೂ […]

ಆಸ್ಪತ್ರೆಯಲ್ಲಿ ನಮ್ಮನ್ನು ನಾಯಿಗಳಂತೆ ನೋಡ್ತಿದ್ದಾರೆ: ಕೊರೊನಾ ಶಂಕಿತ ಕಂಡಕ್ಟರ್ ಕುಟುಂಬ ಕಣ್ಣೀರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 01, 2020 | 5:36 PM

Share

[lazy-load-videos-and-sticky-control id=”MA1CfPVlYbw”]

ಬಾಗಲಕೋಟೆ:ಆಸ್ಪತ್ರೆಗೆ ದಾಖಲಾಗಿ ಐದು ದಿನ ಕಳೆದರೂ ಕೊರೊನಾ ವರದಿ ಬಾರದ ಕಾರಣ, ಶಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ದೊರಕದೆ ನರಳುತ್ತಿರುವ ಪ್ರಸಂಗ ಬಾಗಲಕೋಟೆ ಜಿಲ್ಲೆಯ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ಬಸ್ ಡಿಪೋದಲ್ಲಿ ಕಂಡಕ್ಟರಾಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿದೆ. ಹೀಗಾಗಿ ಅವರನ್ನು ಬಾಗಲಕೋಟೆಯ ಜಿಲ್ಲಾ ಕೊವಿಡ್ ಸೆಂಟರಿಗೆ ಚಿಕಿತ್ಸೆಗೆಂದು ಸೇರಿಸಲಾಗಿದೆ.

ಪತ್ನಿ ಹಾಗೂ ಮಗನ ವಿಡಿಯೋ ಆದರೆ ಐದು ದಿನ ಕಳೆದರೂ ಅವರ ಕೊವಿಡ್ ವರದಿ ಇನ್ನೂ ಬಂದಿಲ್ಲ. ಆದ್ದರಿಂದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಹಾಗೂ ಆಕ್ಸಿಜನ್ ವ್ಯವಸ್ಥೆ ಮಾಡಿಲ್ಲ. ಇದರಿಂದ ಮಾತನಾಡಲಾಗದೆ ಕೊರೊನಾ ಶಂಕಿತ ಕಣ್ಣೀರಿಟ್ಟಿದ್ದಾರೆ.

ಪತಿಯ ಈ ಸ್ಥಿತಿಯನ್ನು ಕಂಡು ಕಣ್ಣೀರಿಡುತ್ತಿರುವ ಪತ್ನಿ ಹಾಗೂ ಆತನ ಮಗ ವಿಡಿಯೋ ಕಾಲ್ ಮುಖಾಂತರ ಕೊರೊನಾ ಶಂಕಿತ ಕಂಡಕ್ಟರ್ ನರಳಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದು, ನಮ್ಮನ್ನು ಆಸ್ಪತ್ರೆಗಳಲ್ಲಿ ನಾಯಿಗಳಂತೆ ನೋಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

Published On - 1:51 pm, Sat, 1 August 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ