AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಬಗ್ಗೆ ವಿಜಯೇಂದ್ರಗೆ ವರದಿ ಸಲ್ಲಿಸಿ ಸಿ.ಟಿ ರವಿ ಹೇಳಿದ್ದೇನು?

ಭಾವನಾ ಹೆಗಡೆ
|

Updated on:Jun 27, 2026 | 12:32 PM

Share

ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ (Cross Voting) ಸಂಬಂಧಿಸಿದಂತೆ ಸಿ.ಟಿ. ರವಿ ನೇತೃತ್ವದ ಸಮಿತಿಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಂತರಿಕ ವರದಿ ಸಲ್ಲಿಸಿದೆ. ನ್‌ಡಿಎ ಮೈತ್ರಿಕೂಟದ ಒಟ್ಟು 12 ಸದಸ್ಯರು ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಈ ಅಡ್ಡಮತದಾನ ನಡೆದಿದೆ ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಜೂನ್ 27: ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ನೇತೃತ್ವದ ಸಮಿತಿಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಂತರಿಕ ವರದಿ ಸಲ್ಲಿಸಿದೆ. ನ್‌ಡಿಎ ಮೈತ್ರಿಕೂಟದ ಒಟ್ಟು 12 ಸದಸ್ಯರು ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಈ ಅಡ್ಡಮತದಾನ ನಡೆದಿದೆ ಎಂದು ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ವರದಿ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಇದು ಆಂತರಿಕ ತನಿಖೆಯ ವರದಿಯಾಗಿದ್ದು, ಸಿದ್ಧಪಡಿಸಿದ ವರದಿಯನ್ನು ರಾಜ್ಯಾಧ್ಯಕ್ಷರಿಗೆ ತಲುಪಿಸಿದ್ದೇವೆ. ಬಿಜೆಪಿ ಭಾಗದಿಂದ ಮೂರು ಮತಗಳು ಕ್ರಾಸ್ ವೋಟ್ ಆಗಿದ್ದು, ಒಂದು ಮತ ಅಸಿಂಧುಗೊಂಡಿದೆ. ಜೆಡಿಎಸ್ ಪಾಲಿನ 22 ಮತಗಳ ಪೈಕಿ ಕೇವಲ 14 ಮತಗಳು ಮಾತ್ರ ಬಂದಿದ್ದು, ಎಂಟು ಮತಗಳು ಕ್ರಾಸ್ ವೋಟ್ ಆಗಿವೆ. ಹೀಗಾಗಿ ಬಿಜೆಪಿ-ಜೆಡಿಎಸ್ ಒಟ್ಟು 12 ಮತಗಳು ಅಡ್ಡಚಲಾವಣೆಯಾಗಿವೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಅನೈತಿಕ ಮಾರ್ಗದಿಂದ ಈ ಅಡ್ಡ ಮತದಾನ ಮಾಡಿಸಿದ್ದು, ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 27, 2026 12:31 PM

Follow Us