ಅತ್ತ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ

Updated on: Jul 25, 2026 | 8:20 PM

ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಒಂದು ರಿಪೋರ್ಟ್​​ ಇಲ್ಲಿದೆ.

ಬೆಂಗಳೂರು, (ಜುಲೈ 25):  ಕರ್ನಾಟಕ ಸಂಪುಟ ವಿಸ್ತರಣೆಗೆ ಹಿಡಿದ ಗ್ರಹಣ ಬಿಡುವ ಲಕ್ಷಣಗಳು ಕಾಣುತ್ತಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಹುಲ್ ಗಾಂಧಿ ಹೋರಾಟ ಅಂತ್ಯವಾದಂತಾಗಿದೆ. ಹೀಗಾಗಿ ಇದೀಗ ಕರ್ನಾಟಕದ ಬೆಳವಣಿಗೆ ಕಡೆ ಗಮನ ಕೊಡಲಿದ್ದು, ಮುಂದಿನ ವಾರ ಸಂಪುಟ ವಿಸ್ತರಣೆ ಸಾಧ್ಯತೆ ದಟ್ಟವಾಗಿದೆ. ಹೌದು…. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದರಿಂದ ರಾಹುಲ್ ಗಾಂಧಿ ಮತ್ತೆ ರಾಜ್ಯದ ಸಂಪುಟ ವಿಸ್ತರಣೆ ಕಡೆ ಗಮನ ಕೊಡಲಿದ್ದಾರೆ ಎನ್ನಲಾಗಿದೆ. ಇನ್ನು ನಿನ್ನೆ (ಜುಲೈ 24) ಕರ್ನಾಟಕದಲ್ಲೇ ಇದ್ದ ಕೆ.ಸಿ. ವೇಣುಗೋಪಾಲ್, ಯಾವುದೇ ಸಮಯದಲ್ಲಿ ಆಗಬಹುದು ಎಂದಿದ್ದರು.

ಇನ್ನು ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕರು ನಾಳೆ ಸಂಜೆಯೇ, ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us