ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?
ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು ದಾವಣಗೆರೆ ನಗರದ ಡಿಆರ್ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.
ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು ದಾವಣಗೆರೆ ನಗರದ ಡಿಆರ್ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚುನಾವಣಾ ಅಧಿಕಾರಿ ಸಂತೋಷ ಕುಮಾರ್, ನಾಳೆ ಅಂದರೆ ಸೋಮವಾರ ಬೆಳಿಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 7.35 ರಿಂದ 7.45 ರೊಳಗೆ ಅಭ್ಯರ್ಥಿ ಗಳ ಎಜೆಂಟರ್ ಸಮ್ಮುಖದಲ್ಲಿ ಇವಿಎಂ ಇಟ್ಟಿರುವ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗುವುದು. ಮೊದಲಿಗೆ ಅಂಚೆ ಮತ ಮತಗಳಿ ಎಣಿಕೆ ಮಾಡಲಾಗುವುದು. ಒಟ್ಟು 217 ಅಂಚೆ ಮತಗಳಿವೆ. ಸೇವಾ ಮತದಾರು ಇನ್ನೂ 25 ಮತಗಳ ಬೇಕು. ನಾಳೆ 7.45 ವರೆಗೆ ಬರುವ ಇಂತಹ ಮತಗಳನ್ನ ಸ್ವೀಕರಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
