ಪ್ರೀ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬಾರದ ಲೋಕಕ್ಕೆ ತೆರಳಿದ ಜೋಡಿ, ಆಗಿದ್ದೇನು?

Updated on: Dec 08, 2025 | 2:59 PM

ಮದುವೆ ಹೊಸ್ತಿಲಲ್ಲಿ ಇದ್ದ ವಧು-ವರ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ದಾಸನಾಳ ಸಮೀಪದ ನಡೆದ ಅಪಘಾತದಲ್ಲಿ ವಧು- ವರ ಜೋಡಿ ಸಾವನ್ನಪ್ಪಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನ ಪಂಪಾವನದಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ಮುಗಿಸಿದ್ದ ಜೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇರಕಲ್ ಗಡದ ಕರಿಯಪ್ಪ (26), ಕವಿತಾ ಪವಾಡೆಪ್ಪ ಮಡಿವಾಳ(19) ಮೃತ ಜೋಡಿ.

ಕೊಪ್ಪಳ, (ಡಿಸೆಂಬರ್ 08): ಮದುವೆ ಹೊಸ್ತಿಲಲ್ಲಿ ಇದ್ದ ವಧು-ವರ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ದಾಸನಾಳ ಸಮೀಪದ ನಡೆದ ಅಪಘಾತದಲ್ಲಿ ವಧು- ವರ ಜೋಡಿ ಸಾವನ್ನಪ್ಪಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನ ಪಂಪಾವನದಲ್ಲಿ ಪ್ರೀ ವೆಡ್ಡಿಂಗ್ ಶೂಟಿಂಗ್ ಮುಗಿಸಿದ್ದ ಜೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇರಕಲ್ ಗಡದ ಕರಿಯಪ್ಪ (26), ಕವಿತಾ ಪವಾಡೆಪ್ಪ ಮಡಿವಾಳ(19) ಮೃತ ಜೋಡಿ. ಕವಿತಾ, ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮದ ನಿವಾಸಿಯಾಗಿದ್ದರು. ಮುಷ್ಠೂರು ಗ್ರಾಮಕ್ಕೆ ಕವಿತಾಳನ್ನು ಬಿಟ್ಟು ಬರಲು ಕರಿಯಪ್ಪ ಬೈಕ್ ನಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಡಿಸೆಂಬರ್ 20-21 ರಂದು ಮದುವೆ ನಿಶ್ಚಯವಾಗಿತ್ತು .ನೂರಾರು ಕನಸು ಕಂಡಿದ್ದ ಜೋಡಿಗೆ ಯಮನಂತೆ ಬಂದು ಲಾರಿ ಪ್ರಾಣತೆಗೆದಿದ್ದು, ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ  ಓದಿ: ಪ್ರೀ ವೆಡ್ಡಿಂಗ್ ಶೂಟ್‌ಗೆ ಹೋದ ಜೋಡಿ ಭೀಕರ ಅಪಘಾತದಲ್ಲಿ ದುರ್ಮರಣ! ಹಸೆಮಣೆ ಏರಬೇಕಿದ್ದವರ ದಾರುಣ ಅಂತ್ಯ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More