ಕೋರ್ಟ್​ ನನಗೆ 10,000 ರೂ. ದಂಡ ವಿಧಿಸಿದೆ: ತುಂಬಿದ ಸಭೆಯಲ್ಲಿ ಕಷ್ಟ ಹೇಳಿಕೊಂಡ ಸಿದ್ದರಾಮಯ್ಯ

Edited By:

Updated on: Mar 01, 2024 | 9:43 PM

ಮೈಸೂರು ನಗರದ ಕಲಾಮಂದಿರದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಲ್ಲಿ ಯಾವುದೇ ಹೋರಾಟ ಫ್ರೀಡಂಪಾರ್ಕ್​ನಲ್ಲೇ ಮಾಡಬೇಕು. ಫ್ರೀಡಂಪಾರ್ಕ್​ನಲ್ಲೇ ಹೋರಾಟ ಮಾಡಬೇಕೆಂದು ಹೈಕೋರ್ಟ್ ಸೂಚಿಸಿದೆ. ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾವು ಹೋರಾಟ ಮಾಡಿದ್ದೆವು. ಆಗ ನನ್ನ ವಿರುದ್ಧ ಪೊಲೀಸರು ಕೇಸ್ ಹಾಕಿದ್ದರು ಎಂದು ಹೇಳಿದ್ದಾರೆ.

ಮೈಸೂರು, ಮಾರ್ಚ್​​ 1: ಕೋರ್ಟ್​ ನನಗೆ 10,000 ರೂ. ದಂಡ ವಿಧಿಸಿದೆ ಎಂದು ತುಂಬಿದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಷ್ಟ ಹೇಳಿಕೊಂಡಿದ್ದಾರೆ. ನಗರದ ಕಲಾಮಂದಿರದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಬೆಂಗಳೂರಲ್ಲಿ ಯಾವುದೇ ಹೋರಾಟ ಫ್ರೀಡಂಪಾರ್ಕ್​ನಲ್ಲೇ ಮಾಡಬೇಕು. ಫ್ರೀಡಂಪಾರ್ಕ್​ನಲ್ಲೇ ಹೋರಾಟ ಮಾಡಬೇಕೆಂದು ಹೈಕೋರ್ಟ್ ಸೂಚಿಸಿದೆ. ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾವು ಹೋರಾಟ ಮಾಡಿದ್ದೆವು. ಆಗ ನನ್ನ ವಿರುದ್ಧ ಪೊಲೀಸರು ಕೇಸ್ ಹಾಕಿದ್ದರು. ಫ್ರೀಡಂಪಾರ್ಕ್​ನಲ್ಲೇ ಬಿಟ್ಟು ಬೇರೆ ಜಾಗದಲ್ಲಿ ಹೋರಾಟ ಮಾಡಿದ್ದಕ್ಕೆ ಕೇಸ್​. ಇತ್ತೀಚೆಗೆ ಹೈಕೋರ್ಟ್ ನನಗೆ ದಂಡ ಹಾಕಿದೆ. ನಾನು ಈಗ ಸುಪ್ರೀಂಕೋರ್ಟ್​ನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 01, 2024 09:29 PM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More