ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಇದ್ದಕ್ಕಿದ್ದಂತೆ ಭೇಟಿ ನೀಡಿ ಆಶ್ಚರ್ಯ ಮೂಡಿಸಿದ ಯೋಗೇಶ್ವರ್
ಕೊನೆ ಘಳಿಗೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ಯೋಗೇಶ್ವರ್ ತಮ್ಮ ಪ್ರಚಾರ ಭಾಷಣಗಳಲ್ಲಿ ಯಾರನ್ನೂ ತೆಗಳುವ ಕೆಲಸ ಮಾಡಲಿಲ್ಲ, ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಟ್ಟರು, ಮತದಾನದ ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಹತಾಶೆಯಿಂದ ಮಾತಾಡಿದ್ದು ಮಾತ್ರ ಆಶ್ಚರ್ಯ ಹುಟ್ಟಿಸಿತ್ತು.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿರುವ ಸಿಪಿ ಯೋಗೇಶ್ವರ್ ಇಂದು ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿದ್ದು ಆಶ್ಚರ್ಯ ಮೂಡಿಸಿದೆ. ಯಾಕೆ ಬಂದಿದ್ದು ಅಂತ ಸಿಎಂ ಅವರನ್ನು ಭೇಟಿಯಾಗಿ ವಾಪಸ್ಸು ಹೋಗುವಾಗ ಯೋಗೇಶ್ವರ್ ಅವರೇ ಹೇಳಿದರು. ಚನ್ನಪಟ್ಟಣದಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ, ಹಾಗಾಗಿ ಮುಖ್ಯಮಂತ್ರಿಯವರಲ್ಲಿ ಡೇಟ್ ಕೇಳಲು ಬಂದಿದ್ದು ಎಂದು ಶಾಸಕ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೇವೇಗೌಡರ ಬಗ್ಗೆ ಕಾಮೆಂಟ್ ಮಾಡುವ ಯಾವುದೇ ನೈತಿಕತೆ ಯೋಗೇಶ್ವರ್ಗಿಲ್ಲ: ಸುರೇಶ್ ಬಾಬು
Follow Us
Latest Videos
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!

