ಕೆರೆ ಉಳಿಸಲು ಜಿಂದಾಲ್ ಸಂಸ್ಥೆ ವಿರುದ್ಧ ಹೋರಾಟ ಮಾಡಿದ ವೃದ್ಧರಿಗೆ ಸಿಪಿಐ ಧಮ್ಕಿ!

Edited By:

Updated on: Jan 19, 2024 | 10:26 PM

ಜಿಂದಾಲ್ ಸಂಸ್ಥೆ ಒತ್ತುವರಿ ಮಾಡಿದ್ದ ಕೆರೆ ಜಮೀನು ಬಿಡಿಸುವ ಸಂಬಂಧ 15 ವರ್ಷಗಳಿಂದಲೂ ರಾಮಕೃಷ್ಣಯ್ಯ ಹೋರಾಟ ಮಾಡುತ್ತಾ ಬಂದಿದ್ದಾರೆ. ಬಟ್ಟೆ ಬಿಚ್ಚಿಸಿ ಜೈಲಿಗೆ ಹಾಕುವುದಾಗಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಮಾದನಾಯಕನಹಳ್ಳಿ ಇನ್ಸೆಪೆಕ್ಟರ್ ಮುರುಳೀಧರ್ ಹೋರಟಗಾರ ರಾಮಕೃಷ್ಣಯ್ಯರಿಗೆ ಧಮ್ಕಿ ಹಾಕಿದ್ದಾರೆ.

ನೆಲಮಂಗಲ, ಜನವರಿ 19: ಕೆರೆ ಉಳಿಸಲು ಜಿಂದಾಲ್ ಸಂಸ್ಥೆ ವಿರುದ್ಧ ಹೋರಾಟ ಮಾಡಿದ ವೃದ್ಧರಿಗೆ ಸಿಪಿಐ (CPI) ಧಮ್ಕಿ ಹಾಕಿದ್ದಾರೆ. ಬಟ್ಟೆ ಬಿಚ್ಚಿಸಿ ಜೈಲಿಗೆ ಹಾಕುವುದಾಗಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ಮಾದನಾಯಕನಹಳ್ಳಿ ಇನ್ಸೆಪೆಕ್ಟರ್ ಮುರುಳೀಧರ್ ಹೋರಟಗಾರ ರಾಮಕೃಷ್ಣಯ್ಯರಿಗೆ ಧಮ್ಕಿ ಹಾಕಿದ್ದಾರೆ. ಮಾದವಾರದ ಕೆರೆ ವಿಷಯದಲ್ಲಿ ಇನ್ಸ್ವ್ ಪೆಕ್ಟರ್ ಮುರಳೀಧರ ಕಂಪನಿ ಪರ ಬ್ಯಾಟಿಂಗ್ ಆರೋಪ ಮಾಡಲಾಗಿದೆ. ವೃದ್ದ ರಾಮಕೃಷ್ಣಯ್ಯರನ್ನ ಠಾಣೆಗೆ ಕರೆಸಿ ವಯಸ್ಸಿಗೆ ಗೌರವ ಕೊಡದೆ ಬಾಯಿಗೆ ಬಂದಂತೆ ಬೆದರಿಕೆ ಹಾಕಿದ್ದು, ಜಿಂದಾಲ್ ತಂಟೆಗೆ ಹೋಗದಂತೆ ಪೊಲೀಸ್ ಠಾಣೆಯಲ್ಲಿ ಅವಾಜ್ ಹಾಕಿದ್ದಾರೆ. ಜಿಂದಾಲ್ ಸಂಸ್ಥೆ ಒತ್ತುವರಿ ಮಾಡಿದ್ದ ಕೆರೆ ಜಮೀನು ಬಿಡಿಸುವ ಸಂಬಂಧ 15 ವರ್ಷಗಳಿಂದಲೂ ರಾಮಕೃಷ್ಣಯ್ಯ ಹೋರಾಟ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More