ನೇಹಾ ಹಿರೇಮಠ ಪ್ರಕರಣ: ಅಪರಾಧಿಯನ್ನು ಎನ್ಕೌಂಟರ್ ಮಾಡುವ ಕಾನೂನು ತರುವ ಬಗ್ಗೆ ಸರ್ಕಾರಗಳು ಯೋಚಿಸಬೇಕು: ಸಂತೋಷ್ ಲಾಡ್

|

Updated on: Apr 19, 2024 | 1:59 PM

ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ರಾಜಕೀಯಕ್ಕೆ ತರುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಲಾಡ್, ಇಂಥ ಪ್ರಕರಣಗಳ ಬಗ್ಗೆ ಯಾರೇ ಆಗಲಿ ಸಂವೇದನೆಹೀನರಾಗಿ ಮಾತಾಡಬಾರದು, ಇದು ರಾಜಕೀಯ ವಿಷಯವಲ್ಲ, ಹೆಣ್ಣುಮಗುವನ್ನು ಕಳೆದುಕೊಂಡಿರುವ ಕುಟುಂಬದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ, ವೃಥಾ ಕಾಮೆಂಟ್ ಗಳನ್ನು ಮಾಡುವ ಬದಲು ಅವರ ಮನೆಗೆ ಹೋಗಿ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಕಾಲೇಜೊಂದರಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಪ್ರತಿಧ್ವನಿಸುತ್ತಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಇಂಥ ಘಟನೆಗಳು ಯಾವುದೇ ರಾಜ್ಯ, ದೇಶ ಮತ್ತು ಸಮುದಾಯಗಳನ್ನು (communities) ತಲೆತಗ್ಗಿಸುವಂತೆ ಮಾಡುತ್ತವೆ, ಕೃತ್ಯ ಅತ್ಯಂತ ಹೀನ ಮತ್ತು ಖಂಡನೀಯ ಎಂದು ಹೇಳಿದರು. ವಿರೋಧ ಪಕ್ಷಗಳ ನಾಯಕರು ಪ್ರಕರಣವನ್ನು ರಾಜಕೀಯಕ್ಕೆ ತರುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಲಾಡ್, ಇಂಥ ಪ್ರಕರಣಗಳ ಬಗ್ಗೆ ಯಾರೇ ಆಗಲಿ ಸಂವೇದನೆಹೀನರಾಗಿ (insensitive) ಮಾತಾಡಬಾರದು, ಇದು ರಾಜಕೀಯ ವಿಷಯವಲ್ಲ, ಹೆಣ್ಣುಮಗುವನ್ನು ಕಳೆದುಕೊಂಡಿರುವ ಕುಟುಂಬದ ಬಗ್ಗೆ ಎಲ್ಲರೂ ಯೋಚಿಸಬೇಕಿದೆ, ವೃಥಾ ಕಾಮೆಂಟ್ ಗಳನ್ನು ಮಾಡುವ ಬದಲು ಅವರ ಮನೆಗೆ ಹೋಗಿ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿ ಧೈರ್ಯ ತುಂಬುವ ಕೆಲಸ ಮಾಡಿದರೆ ಅದು ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದು ಲಾಡ್ ಹೇಳಿದರು. ಇಂಥ ಘಟನೆಗಳು ಪುನಾರಾವರ್ತನೆ ಆಗುವುದನ್ನು ತಡೆಯಲು ತಪ್ಪಿತಸ್ಥರನ್ನು ಎನ್ಕೌಂಟರ್ ಮಾಡಿ ಸಾಯಿಸುವ ಕಾನೂನು ಜಾರಿಗೆ ತರುವುದನನ್ನು ಸರ್ಕಾರಗಳು ಯೋಚಿಸಬೇಕು ಎಂದು ಸಚಿವ ಹೇಳಿದ ಲಾಡ್ ಇದು ತಮ್ಮ ವೈಯಕ್ತಿಕ ಅಭಿಪ್ರಾಯವೆಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಹುಬ್ಬಳ್ಳಿ ಯುವತಿ ಸಾವು ಲವ್ ಜಿಹಾದ್ ಪ್ರಕರಣವಲ್ಲ, ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು: ಜಿ ಪರಮೇಶ್ವರ, ಗೃಹ ಸಚಿವ

Follow us on