ವಿಜಯೇಂದ್ರರನ್ನು ಟೀಕಿಸಿದರೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಟೀಕಿಸಿದಂತೆ: ಎಂಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 27, 2024 | 4:30 PM

ರೇಣುಕಾಚಾರ್ಯ ಸಹ ಕೆಲ ಮಾಜಿ ಶಾಸಕರನ್ನು ಜೊತೆಗೆ ಕರೆದುಕೊಂಡು ಯತ್ನಾಳ್ ತಂಡದ ಸದಸ್ಯರಿಗೆ ದೇವರು ಬುದ್ಧಿ ನೀಡಲಿ ಅಂತ ನವೆಂಬರ್ 29ರಿಂದ ಒಂದು ಅಭಿಯಾನ ನಡೆಸುತ್ತಿದ್ದಾರೆ. ಇವರ ತಂಡವು ಮಾಜಿ ಶಾಸಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮನೆಯಿಂದ ಹೊರಟು ಮುಳುಬಾಗಿಲು ಕುರುಡುಮಲೈ ಗಣೇಶನ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದು ಅಲ್ಲಿಂದ ಮೈಸೂರಿಗೆ ತೆರಳಲಿದೆ.

ಬೆಂಗಳೂರು: ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಿಜಯಪುರದ ಶಾಸಕ ಮತ್ತು ವಕ್ಫ್ ವಿರುದ್ಧ ಹೋರಾಟ ನಡೆಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಮರ ಸಾರಿದಂತಿದೆ. ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಯತ್ನಾಳ್ ಟೀಕಿಸುವುದು ಸರಿಯಲ್ಲ, ಸೋತವರು ಮತ್ತು ಟಿಕೆಟ್ ಸಿಗದ 4-5 ಜನನ್ನು ಜೊತೆಗಿಟ್ಟುಕೊಂಡು ಅವರು ಹೋರಾಟ ಅಂತ ಮಾಡುತ್ತಿದ್ದಾರೆ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದು ರಾಷ್ಟ್ರೀಯ ನಾಯಕರು ಹಾಗಾಗಿ ವಿಜಯೇಂದ್ರರನ್ನು ಟೀಕಿಸುವುದು ವರಿಷ್ಠರನ್ನು ಟೀಕಿಸಿದಂತೆ, ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸುವಾಗ ಇವರಲ್ಲಿ ಯಾರೂ ಕಣ್ಣು ಬಿಟ್ಟಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.