ನಮ್ಮ ನೋವು ಅರ್ಥವಾದರೆ ಜೀವಂತವಾಗಿದ್ದೇವೆ, ಬೇರೆಯವರ ನೋವು ಅರ್ಥವಾದರೆ ಮನುಷ್ಯರಾಗಿದ್ದೇವೆ ಅಂತರ್ಥ: ಡಾ ಸಿಎನ್ ಮಂಜುನಾಥ್

ಚುನಾವಣೆ ಮತ್ತು ರಾಜಕಾರಣದಲ್ಲಿ ಪರಸ್ಪರ ಟೀಕೆ ನಿಂದನೆಗಳು ಬೇಡ, ಅವು ಕೇವಲ ಮಾಧ್ಯಮಗಳಿಗೆ ಆಹಾರವಾಗುತ್ತವೆಯೇ ಹೊರತು ನಮಗೆ ಪ್ರಯೋಜನ ವಾಗುವುದಿಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿಯಾಗಿ ಹೆಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿಯವರು ಮಾಡಿರುವ ಸಾಧನೆಗಳ ಮೇಲೆ ಚುನಾವಣೆ ಎದುರಿಸೋಣ ಎಂದು ಡಾ ಮಂಜುನಾಥ್ ಹೇಳಿದರು.

ನಮ್ಮ ನೋವು ಅರ್ಥವಾದರೆ ಜೀವಂತವಾಗಿದ್ದೇವೆ, ಬೇರೆಯವರ ನೋವು ಅರ್ಥವಾದರೆ ಮನುಷ್ಯರಾಗಿದ್ದೇವೆ ಅಂತರ್ಥ: ಡಾ ಸಿಎನ್ ಮಂಜುನಾಥ್
| Updated By: ರಮೇಶ್ ಬಿ. ಜವಳಗೇರಾ

Updated on:Mar 15, 2024 | 5:43 PM

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾಅ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ (Dr CN Manjunath) ಅವರಂಥ ಮೇಧಾವಿಗಳು ರಾಜಕೀಯ ಕ್ಷೇತ್ರಕ್ಕೆ (political field) ಯಾಕೆ ಬೇಕು ಅನ್ನೋದು ಅವರ ಮಾತುಗಳಿಂದ ಅರ್ಥಮಾಡಿಕೊಳ್ಳಬಹುದು. ನಿನ್ನೆ ಆರ್ ಅರ್ ವಿಧಾನಸಭಾ ಕ್ಷೇತ್ರದಲ್ಲಿ ಮಾತಾಡಿದ ಅವರು ಒಬ್ಬ ವೈದ್ಯನಂತೆ ಮಾತಾಡುವುದು ನಿಜವಾದರೂ ರಾಜಕಾರಣದ ಒಳಹೊರಗುಗಳನ್ನು ಅರ್ಥಮಾಡಿಕೊಂಡಿದ್ದಾರೆ. ಅವರು ಒಂದು ಸರಳವಾದ ಮಾತು ಹೇಳುತ್ತಾರೆ-ನಮ್ಮ ನೋವು (pain) ನಮಗೆ ಅರ್ಥವಾದರೆ ನಾವು ಬದುಕಿದ್ದೇವೆ ಅಂತರ್ಥ, ಬೇರೆಯವರ ನೋವು ಅರ್ಥವಾದರೆ ಮನುಷ್ಯರಾಗಿದ್ದೇವೆ ಅಂತರ್ಥ! ಆಯುಷ್ಮಾನ್ ಭಾರತ್ ಯೋಜನೆಯಲ್ಲಿರುವ ನ್ಯೂನತೆಗಳನ್ನು ಕೇವಲ ಡಾ ಮಂಜುನಾಥ್ ಮಾತ್ರ ಹೇಳಬಲ್ಲರು. ಚುನಾವಣೆ ಮತ್ತು ರಾಜಕಾರಣದಲ್ಲಿ ಪರಸ್ಪರ ಟೀಕೆ ನಿಂದನೆಗಳು ಬೇಡ, ಅವು ಕೇವಲ ಮಾಧ್ಯಮಗಳಿಗೆ ಆಹಾರವಾಗುತ್ತವೆಯೇ ಹೊರತು ನಮಗೆ ಪ್ರಯೋಜನ ವಾಗುವುದಿಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿಯಾಗಿ ಹೆಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿಯವರು ಮಾಡಿರುವ ಸಾಧನೆಗಳ ಮೇಲೆ ಚುನಾವಣೆ ಎದುರಿಸೋಣ ಎಂದು ಡಾ ಮಂಜುನಾಥ್ ಹೇಳಿದರು. ವಾಟ್ಸ್ಯಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಸುಳ್ಳುಗಳನ್ನು ನಂಬಿ ನಾವು ಬದುಕುವುದು ಬೇಡ, ಸತ್ಯಕ್ಕೆ ಸಾಕ್ಷಿ ಕೇಳುವ ಕಾಲಘಟ್ಟದಲ್ಲಿ ನಾವು ಜೀವಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಾ‌‌ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾದ ಕುಮಾರಸ್ವಾಮಿ: ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಬಹುತೇಕ ಖಚಿತ

Published On - 11:27 am, Thu, 14 March 24

Follow us
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು