ಧಾರಾಕಾರ ಮಳೆಗೆ ದಾವಣಗೆರೆ ಜಿಲ್ಲೆಯ ಕೆರೆಗಳು ಭರ್ತಿ, ಏರಿ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಅರುಣ್​ ಕುಮಾರ್​ ಬೆಳ್ಳಿ

Updated on: Oct 18, 2024 | 10:27 AM

ಮಳೆಯಾಗದಿದ್ದರೆ ಮತ್ತು ಅಗತ್ಯಕ್ಕಿಂತ ಜಾಸ್ತಿ ಮಳೆಯಾದರೆ ರೈತರಿಗೆ ಬವಣೆ ತಪ್ಪಿದ್ದಲ್ಲ. ಬುಧವಾರ ರಾತ್ರಿ ಸುರಿದ ಮಳೆಗೆ ದಾವಣಗೆರೆ ಜಿಲ್ಲೆಯಲ್ಲಿರುವ ಕೆರೆಗಳೆಲ್ಲ ಭರ್ತಿಯಾಗಿವೆ. ಮಳೆ ಸುರಿದ ಬಗ್ಗೆ ರೈತರು ನೆಮ್ಮದಿ ತಳೆಯುವಂತೆಯೇ ಕೆರೆಗಳು ಉಕ್ಕಿ ಹರಿಯುತ್ತಿರುವ, ಕೋಡಿ ಹರಿದ ಇಲ್ಲವೇ ಏರಿ ಒಡೆದ ಸಮಸ್ಯೆ ಎದುರಾಗಿದೆ.

ದಾವಣಗೆರೆ: ಜಿಲ್ಲೆಯಾದ್ಯಂತ ನಿನ್ನೆ ಧಾರಾಕಾರವಾಗಿ ಮಳೆ ಸುರಿದ ಸಂಗತಿಯನ್ನು ವರದಿ ಮಾಡಲಾಗಿದೆ. ಇವತ್ತು ಮಳೆಯಾಗುತ್ತಿಲ್ಲವಾದರೂ ಮೋಡಕವಿದ ವಾತಾವರಣವಿದೆ ಮತ್ತು ಅಲ್ಲಲ್ಲಿ ಜಿನುಗು ಮಳೆಯಾಗುತ್ತಿದೆ. ನಿನ್ನೆಯ ಭಾರೀ ಮಳೆಗೆ ಕೆರೆಗಳೆಲ್ಲ ತುಂಬಿವೆ ಮತ್ತು ಜಿಲ್ಲೆಯ ಕರೇಮಾಗನಹಳ್ಳಿಯ ಕೆರೆ ಏರಿ ಒಡೆದು ಹೋಗಿದ್ದು ಕೆರೆಯ ನೀರು ಜಮೀನುಗಳಿಗೆ ಹರಿಯುತ್ತಿದೆ. ನೀರು ಪೋಲಾಗುವುದರ ಜೊತೆಗೆ ರೈತರ ಬೆಳೆಗಳು ಸಹ ಹಾಳಾಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ದಾವಣಗೆರೆ: ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಜನಜೀವನ ಅಸ್ತವ್ಯಸ್ತ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.