AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jun 30, 2026 | 1:31 PM

Share

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಇಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.

ಮಂಗಳೂರು, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.

ಇಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us