ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ

Updated on: Oct 22, 2024 | 8:01 AM

ದಿನ ಕಳೆದಂತೆಲ್ಲ ಬಿಗ್ ಬಾಸ್​ ಮನೆಯಲ್ಲಿ ಟೆನ್ಷನ್ ಹೆಚ್ಚುತ್ತಿದೆ. ಶಿಶಿರ್ ಬಳಿಕ ಅಲ್ಪಾವಧಿಗೆ ಹನುಮಂತ ಕ್ಯಾಪ್ಟನ್ ಆಗಿದ್ದರು. ಈಗ ಹೊಸ ಕ್ಯಾಪ್ಟನ್ ಆಯ್ಕೆಗೆ ಟಾಸ್ಕ್ ನೀಡಲಾಗಿದೆ. ಈ ವೇಳೆ ಶಿಶಿರ್ ಮತ್ತು ಉಗ್ರಂ ಮಂಜು ನಡುವೆ ಜಗಳ ನಡೆದಿದೆ. ಈಗ ಜಗಳ ಮಿತಿಮೀರಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಟಾಸ್ಕ್ ವೇಳೆ ಕ್ರೌರ್ಯ ಮಿತಿ ಮೀರಿತ್ತು. ಸೋಪ್ ನೀರು ಎರಚಿದ್ದರಿಂದ ಸ್ಪರ್ಧಿಗಳು ಆಸ್ಪತ್ರೆ ಸೇರುವಂತೆ ಆಗಿತ್ತು. ಈಗ ಅದು ಮತ್ತೆ ಮರುಕಳಿಸುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವೂ ಇದೆ. ಬಿಗ್ ಬಾಸ್ ಮನೆಯಲ್ಲಿ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಸ್ಪರ್ಧಿಗಳ ಮಧ್ಯೆ ಕಿತ್ತಾಡಿಕೊಂಡಿದ್ದಾರೆ. ಟಾಸ್ಕ್​​ನ ಹಾಳು ಮಾಡಬೇಕು ಎಂಬ ಕಾರಣಕ್ಕೆ ಕಿರಿಕ್ ನಡೆದಿದೆ. ಇದು ಮಿತಿಮೀರುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More