ಪುಟ್ಟರಾಜು ಮಂಡ್ಯಕ್ಕೆ ಅಭ್ಯರ್ಥಿ ಅಂತ ಫಿಕ್ಸ್ ಆಗಿತ್ತು, ಕೊನೆ ಘಳಿಗೆಯಲ್ಲಿ ಕುಮಾರಸ್ವಾಮಿ ಮದುವೆ ಗಂಡಾದರು: ಬಾಲಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Nov 07, 2024 | 2:06 PM

ಚನ್ನಪಟ್ಟಣವನ್ನು ಇನ್ನೂ ಮೂರೂವರೆ ವರ್ಷ ಜೆಡಿಎಸ್ ಪ್ರತಿನಿಧಿಸಲಿ ಅಂತ ವಿರೋಧ ಪಕ್ಷದವರು ಹೇಳಿದಂತೆ ಕೇಳಲು ಇದೇನು ತಮಾಷೆನಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆ, ಯಾರನ್ನು ಆರಿಸಬೇಕೆಂದು ಜನ ತೀರ್ಮಾನ ಮಾಡುತ್ತಾರೆ ಎಂದು ಬಾಲಕೃಷ್ಣ ಹೇಳಿದರು.

ರಾಮನಗರ: ಸಿಪಿ ಯೋಗೇಶ್ವರ್ ಪರ ಪ್ರಚಾರ ಮಾಡುತ್ತಾ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್​ ಡಿ ಕುಮಾರಸ್ವಾಮಿಯವರನ್ನು ದೆಹಲಿಗೆ ಕರೆದೊಯ್ದು ಮಂತ್ರಿ ಮಾಡುವ ಉದ್ದೇಶವೇನೂ ಇರಲಿಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಸಿಎನ್ ಮಂಜುನಾಥ ಗೆದ್ದರೆ ತನ್ನ ಪ್ರಭಾವ ಕಡಿಮೆಯಾದೀತು ಎಂಬ ಆತಂಕದಲ್ಲಿದ್ದ ಕುಮಾರಸ್ವಾಮಿ ಅದಾಗಲೇ ಅಭ್ಯರ್ಥಿಯೆಂದು ಖಚಿತವಾಗಿದ್ದ ಸಿಎಸ್ ಪುಟ್ಟರಾಜು ಅವರನ್ನು ಹಿಂದೆ ಸರಿಸಿ ತಾವೇ ಸ್ಪರ್ಧೆಗಿಳಿದರು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬೇರೆ ಸಿಎಂಗಳ ತರ ಸಿದ್ದರಾಮಯ್ಯ ಆಸ್ತಿ ಮಾಡಲು ಮುಂದಾಗಿದ್ರೆ ಅರ್ಧ ಬೆಂಗಳೂರು ಅವರದ್ದೇ ಇರ್ತಿತ್ತು: ಶಾಸಕ ಬಾಲಕೃಷ್ಣ

Published on: Nov 07, 2024 02:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.