AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಬಂಧನದ ಬೆಳವಣಿಗೆಗಳು ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಚಿತಾವಣೆ ಮೇರೆಗೆ ನಡೆದಿವೆ: ಅಶೋಕ

ರವಿ ಬಂಧನದ ಬೆಳವಣಿಗೆಗಳು ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಚಿತಾವಣೆ ಮೇರೆಗೆ ನಡೆದಿವೆ: ಅಶೋಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 20, 2024 | 2:59 PM

Share

ವಿಷಯ ತಿಳಿಯುತ್ತಿದ್ದಂತೆಯೇ ವಿಜಯೇಂದ್ರ ಬೆಂಗಳೂರಿಂದ ಇಲ್ಲಿಗೆ ಧಾವಿಸಿದ್ದಾರೆ, ಬೆಳಗಿನ ಜಾವ ಮೂರು ಗಂಟೆಯವರೆಗೆ ತಾನು ಇದೇ ಸಂಬಂಧ ಓಡಾಡುತ್ತಿದ್ದೆ, ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಗೃಹ ಸಚಿವನಾಗಿರುವ ತನಗೆ ಪೊಲೀಸರು ಠಾಣೆಯೊಳಗೆ ಬರಲು ಬಿಟ್ಟಿಲ್ಲ, ರವಿ ಅವರನ್ನು ಬಿಡಿಸಲಲ್ಲ, ಅದರೆ ದೂರು ದಾಖಲಿಸಲು ತಾನು ಸ್ಟೇಶನ್​ಗೆ ಹೋಗಿದ್ದು ಎಂದು ಅಶೋಕ ಹೇಳಿದರು.

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿಯವರನ್ನು ಬಂಧಿಸುವಲ್ಲಿ ಹಲವು ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ವಿಪಕ್ಷ ನಾಯಕ ಅರ್ ಅಶೋಕ ಹೇಳಿದರು. ಅವರಿಗೆ ನೋಟೀಸ್ ನೀಡದೆ ಬಂಧಿಸಲಾಗಿದೆ, ಬಂಧಿಸುವ ಮೊದಲು ಸಭಾಪತಿಗಳಿಗೆ ದೂರು ಸಲ್ಲಿಸಲಾಗಿಲ್ಲ, ಪೊಲೀಸರು ಮೇಲಿಂದ ಬರೋ ಆದೇಶಗಳನ್ನು ಪಾಲಿಸುತ್ತಾ ಬಂದಿದ್ದಾರೆ, ಡಿಕೆ ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಚಿತಾವಣೆ ಮೇರೆಗೆ ಇದೆಲ್ಲ ನಡೆಯುತ್ತಿದೆ, ಸುವರ್ಣ ಸೌಧದ ಅವರಣದಲ್ಲೇ ಅವರಿಬ್ಬರು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನ್ಯಾಯಾಲಯದಲ್ಲಿ ರವಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:ರವಿಯನ್ನು ಕಾಡಿನಲ್ಲಿ ಸುತ್ತಿಸುವಾಗ ಪಿಎಫ್​ಐನವರು ದಾಳಿ ಮಾಡಿದ್ದರೆ ಅದಕ್ಕೆ ಹೊಣೆ ಯಾರಾಗುತ್ತಿದ್ದರು? ಅರ್ ಅಶೋಕ  

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.