Ravi slams partymen: ಹೆಸರು ಉಲ್ಲೇಖಿಸದೆ ಬಸನಗೌಡ ಯತ್ನಾಳ್ ಮತ್ತು ರೇಣುಕಾಚಾರ್ಯರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ

Updated on: Jun 30, 2023 | 6:33 PM

ಪಕ್ಷದ ಆಂತರಿಕ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕಾಗುತ್ತದೆ ಎಂದು ರವಿ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ಪಕ್ಷದ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಹೆಸರುಗಳನ್ನು ಉಲ್ಲೇಖಿಸದೆ ತರಾಟೆಗೆ ತೆಗದುಕೊಂಡರು. ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ವವಸ್ಥೆ  ಜಾರಿಯಲ್ಲಿರುವುದರಿಂದ ಯಾವುದನ್ನು ಎಲ್ಲಿ ಮಾತಾಡಬೇಕು ಅನ್ನೋ ಪರಿಜ್ಞಾನ ಇರಬೇಕು ಎಂದು ರವಿ ಹೇಳಿದರು. ಮಾತಾಡಲು ಎಲ್ಲರಿಗೂ ಅವಕಾಶ ಮತ್ತು ಮಿತಿ ಇರುತ್ತವೆ, ಬೇರೆ ಪಕ್ಷಗಳ ಬಗ್ಗೆ ಮಾತಾಡಬೇಕಾದರೆ ಸಾರ್ವಜನಿಕವಾಗಿ ಮಾತಾಡಬೇಕಾಗುತ್ತ್ತದೆ ಹಾಗೆಯೇ ಪಕ್ಷದ ಆಂತರಿಕ ವಿಷಯಗಳನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚಿಸಬೇಕಾಗುತ್ತದೆ ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More