ಕಷ್ಟದಲ್ಲಿರುವ ಜನರಿಗೆ ಸರ್ಕಾರ ಬರೆ ಹಾಕಿದೆ, ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ

ಇದು ಜನವಿರೋಧಿ ಸರ್ಕಾರ, ಸತ್ತು ಹೋಗಿರುವ ಸರ್ಕಾರ. ಜನರೇ ಈ ಸರ್ಕಾರವನ್ನು ದಫನ್ ಮಾಡೋ ದಿನ ಬರುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಂಎಲ್​ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ನಾಚಿಕೆ, ಮಾನ, ಮರ್ಯಾದಿ ಅನ್ನೋದಾದ್ರೆ ಯಾವುದನ್ನ ಇಟ್ಕೊಂಡು ಇದನ್ನ ಮಾಡಿದ್ದೀರಾ ಎಂದು ಕಿಡಿಕಾರಿದರು.

ಕಷ್ಟದಲ್ಲಿರುವ ಜನರಿಗೆ ಸರ್ಕಾರ ಬರೆ ಹಾಕಿದೆ, ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ
| Updated By: ಆಯೇಷಾ ಬಾನು

Updated on: Jun 16, 2024 | 11:59 AM

ಚಿಕ್ಕಮಗಳೂರು, ಜೂನ್.16: ಪೆಟ್ರೋಲ್-ಡೀಸೆಲ್​​​​ ದರ (Petrol Diesel Price increase) ಏರಿಕೆ ಖಂಡಿಸಿ ಬಿಜೆಪಿ (BJP) ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ ಬೆಲೆ ಏರಿಕೆ‌ಯನ್ನೇ ನೀತಿ ಮಾಡಿಕೊಂಡಿದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ (C.T.Ravi) ಹೇಳಿಕೆ ನೀಡಿದ್ದಾರೆ. ತೈಲ ಬೆಲೆ ಏರಿಕೆಯಾದ್ರೆ ಬೆಲೆ ಏರಿಕೆಗೆ ಲೈಸೆನ್ಸ್​​​​ ಕೊಟ್ಟಂತೆ. ಕಷ್ಟದಲ್ಲಿರುವ ಜನರಿಗೆ ಸರ್ಕಾರ ದರ ಏರಿಕೆ ಬರೆ ಹಾಕಿದೆ. ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ. ಹಿಂದೆ ಮೋದಿ ಪೆಟ್ರೋಲ್ ದರ ಏರಿಸಿದ್ದಾರೆಂದು ಸಿಎಂ ಬೈಕ್ ಹೊತ್ತೊಯ್ಯುವ ಅಣುಕು ಪ್ರದರ್ಶನ ಮಾಡಿದ್ರು. ಈಗ ಯಾರನ್ನು ಹೊತ್ಕೊಂಡು ಹೋಗಬೇಕು. ನಿಮ್ಮ ಸರ್ಕಾರವನ್ನೇ ಹೊತ್ಕೊಂಡು ಹೋಗಬೇಕು. ಇದು ಜನವಿರೋಧಿ ಸರ್ಕಾರ, ಸತ್ತು ಹೋಗಿರುವ ಸರ್ಕಾರ. ಜನರೇ ಈ ಸರ್ಕಾರವನ್ನು ದಫನ್ ಮಾಡೋ ದಿನ ಬರುತ್ತೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಂಎಲ್​ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ಚುನಾವಣೆ ಸೋಲಿನ ಬಳಿಕ ಸರ್ಕಾರ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ರಾಜಕೀಯ ಪಕ್ಷ, ನಾಯಕರ ಮೇಲೆ ಸೇಡು ಆಯ್ತು, ಈಗ ಜನಸಾಮಾನ್ಯರ ಮೇಲೆ. ಕೂಡಲೇ ಬೆಲೆ ಏರಿಕೆ ಅದೇಶವನ್ನ ಹಿಂಪಡೆಯಬೇಕು. ನೀವು ಮಾಡಿರೋದು ಬೆಲೆ ಏರಿಕೆ, ಲೂಟಿ ಎರಡೇ. ಬೇರೇನು ಮಾಡಿದ್ದೀರಾ? ಓಲೈಕೆ ರಾಜಕಾರಣಕ್ಕೆ ಗ್ಯಾರಂಟಿ ಆಸೆ ತೋರಿಸಿದ್ರಿ, ಅದು ಧಕ್ಕದಿದ್ದಾಗ ಬೆಲೆ ಏರಿಕೆ ಮಾಡಿದ್ದೀರಾ. ನಾಚಿಕೆ, ಮಾನ, ಮರ್ಯಾದಿ ಅನ್ನೋದಾದ್ರೆ ಯಾವುದನ್ನ ಇಟ್ಕೊಂಡು ಇದನ್ನ ಮಾಡಿದ್ದೀರಾ ಎಂದು ಕಿಡಿಕಾರಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಬಳ್ಳಾರಿ: ರಾಮಗಡ ಅರಣ್ಯ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಪತ್ರ
ಬಳ್ಳಾರಿ: ರಾಮಗಡ ಅರಣ್ಯ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಪತ್ರ
ಭಕ್ತಿ ಎಂದರೇನು, ನಿಜವಾದ ಭಕ್ತಿ ಹೇಗಿರುತ್ತೆ? ಈ ವಿಡಿಯೋ ನೋಡಿ
ಭಕ್ತಿ ಎಂದರೇನು, ನಿಜವಾದ ಭಕ್ತಿ ಹೇಗಿರುತ್ತೆ? ಈ ವಿಡಿಯೋ ನೋಡಿ
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು
ಲೈಂಗಿಕ ದೌರ್ಜನ್ಯ ಪ್ರಕರಣ; ಜೆಡಿಎಸ್ ಎಂಎಲ್​ಸಿ ಡಾ.ಸೂರಜ್ ರೇವಣ್ಣ ಜೈಲುಪಾಲು