ಸಿಟಿ ರವಿಯವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎಂದ ವಕೀಲ ಶ್ರೀನಿವಾಸ ರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 20, 2024 | 2:11 PM

ವಿಧಾನ ಪರಿಷತ್​ನ ಗೌರವಾನ್ವಿತ ಸದಸ್ಯರಾಗಿರುವ ರವಿಯವರನ್ನು ಪೊಲೀಸರು ಅತ್ಯಂತ ಕೆಟ್ಟದ್ದಾಗಿ ನಡೆಸಿಕೊಂಡಿದ್ದಾರೆ, ಪರಿಷತ್ ಕಸ್ಟೋಡಿಯನ್ ಆಗಿರುವ ಸಭಾಪತಿಯವರನ್ನು ವಿಶ್ವಾಸಕ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ, ಅವರಿಗೆ ಊಟ ನೀರು ಕೊಡದ ಕಾರಣ ದೈಹಿಕ ಮತ್ತು ಮಾನಸಿಕವಾಗಿ ಬಳಲಿದ್ದಾರೆ, ಅವರನ್ನು ರಾತ್ರಿಯಿಡೀ ಬೇರೆ ಬೇರೆ ಊರುಗಳಿಗೆ ಸುತ್ತಿಸಲಾಗಿದೆ ಎಂದು ವಕೀಲ ಶ್ರೀನಿವಾಸ ರಾವ್ ಹೇಳಿದರು.

ಬೆಳಗಾವಿ: ಪೊಲೀಸರಿಂದ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆಯೆಂದು ಅವರ ವಕೀಲ ಶ್ರೀನಿವಾಸ ರಾವ್ ಹೇಳಿದರು. ಜಾಮೀನು ಕೋರಿ ವಾದ ಮಂಡಿಸಿದ ಬಳಿಕ ಕೋರ್ಟ್ ಹೊರಗಡೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜೆಎಂಎಫ್​ಸಿ ಗೆ ಜಾಮೀನು ನೀಡುವ ಅಧಿಕಾರವಿಲ್ಲ ಎಂಬ ವಿಷಯ ಪ್ರಸ್ತಾಪವಾದಾಗ ವ್ಯಕ್ತಿಯೊಬ್ಬನ ಸ್ವಾತಂತ್ರ್ಯವು ಅತ್ಯಂತ ಪ್ರಾಮುಖ್ಯವಾದದ್ದು ಎಂದು ಮಾನ್ಯ ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಈ ಕೋರ್ಟ್ ಅದನ್ನು ಪರಿಗಣಿಸಿ ಜಾಮೀನು ನೀಡಬಹುದೆಂಬ ಸಂಗತಿಯನ್ನು ಜೆಎಂಎಫ್​ಸಿಗೆ ಮನವರಿಕೆ ಮಾಡಿಸಲಾಗಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸಿಟಿ ರವಿ ಬಂಧನ: ಉಪಸಭಾಪತಿ ಗರಂ, ಹಕ್ಕುಚ್ಯುತಿ ಮಂಡನೆ ಎಚ್ಚರಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.