Bengaluru News: ಸಿಂಗಪೂರ್​ನಿಂದ ಕೆಐಎ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಇಬ್ಬರು ವಿದೇಶಿ ಪ್ರಜೆಗಳಿಂದ ಬರಾಮತ್ತಾಗಿದ್ದು 2.6 ಕೇಜಿ ಅಕ್ರಮ ಚಿನ್ನ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 26, 2023 | 11:12 AM

ಕಳ್ಳರು ಸಿಂಗಾಪೂರ್ ಕಸ್ಟಮ್ಸ್ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಫಲರಾದರೂ ಬೆಂಗಳೂರಿನ ಅಧಿಕಾರಿಗಳ ಕಣ್ತಪ್ಪಿಸುವುದು ಸಾಧ್ಯವಾಗಿಲ್ಲ.

ಬೆಂಗಳೂರು: ಕಳ್ಳರು, ವಿದೇಶಗಳಿಂದ ಚಿನ್ನ ಸ್ಮಗ್ಲ್ ಮಾಡುವವರು ಚಾಪೆ ಕೆಳಗೆ ತೂರಿದರೆ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಕಸ್ಟಮ್ಸ್ ಅಧಿಕಾರಿಗಳು (customs officials) ರಂಗೋಲಿ ಕೆಳಗೆ ತೂರುತ್ತಾರೆ-ಇದು ಅನೇಕ ಸಲ ಸಾಬೀತಾಗಿರುವ ಅಂಶ. ನಿನ್ನೆ ರಾತ್ರಿ ಬೆಂಗಳೂರಲ್ಲಿ ಏನಾಗಿದೆ ಅಂದ್ರೆ, ವಿದೇಶಿ ಮೂಲದ ಇಬ್ಬರು ಪ್ರಯಾಣಿಕರು ಸಿಂಗಪೂರ್ ನಿಂದ (Singapore) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬಂದಿಳಿದಿದ್ದಾರೆ. ಅವರಿಬ್ಬರೇ ತಮ್ಮ ಲಗ್ಗೇಜ್ ನೊಂದಿಗೆ ಬಂದಿದ್ದರೆ ಯಾವುದೇ ತಾಪತ್ರಯ ಇರುತ್ತಿರಲಿಲ್ಲ. ಆದರೆ ಮಹಾನುಭಾವರು ತಮ್ಮೊಂದಿಗೆ ಅಕ್ರಮವಾಗಿ 2.600 ಕೇಜಿ ಚಿನ್ನ ತೆಗೆದುಕೊಂಡು ಬಂದಿದ್ದಾರೆ. ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಕಣ್ಣಿಗೆ ಬೀಳದಂತಿರಲು ಒಂದು ವಿಶೇಷ ಬೆಲ್ಟ್ ವಿನ್ಯಾಸಗೊಳಿಸಿ ಅದರಲ್ಲಿ ಅಡಗಿಸಿಕೊಂಡು ಬಂದಿದ್ದಾರೆ. ಕಳ್ಳರು ಸಿಂಗಾಪೂರ್ ಕಸ್ಟಮ್ಸ್ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಸಫಲರಾದರೂ ಬೆಂಗಳೂರಿನ ಅಧಿಕಾರಿಗಳ ಕಣ್ತಪ್ಪಿಸುವುದು ಸಾಧ್ಯವಾಗಿಲ್ಲ. ಸಿಕ್ಕಿಬಿದ್ದು ಅಧಿಕಾರಿಗಳ ವಶದಲ್ಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 26, 2023 11:10 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.