ಕಾವೇರಿ ನೀರು ವಿವಾದ: ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ಕಾವೇರಿ ನದಿ ನೀರು ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶಿಸಿದ್ದು, ಆದ್ರೆ, ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಆದರೂ ಸಹ ಸಹ ಪ್ರಯೋಜನವಾಗಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು (ಜುಲೈ 30) ತುರ್ತು ಸಭೆ ನಡೆಸಿ CWRC ಆದೇಶವನ್ನು ಎತ್ತಿ ಹಿಡಿದಿದ್ದು, 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ.
ನವದೆಹಲಿ, (ಜುಲೈ 30): ಕಾವೇರಿ ನದಿ ನೀರು ವಿವಾದ (Cauvery river water Dispute)ಮತ್ತೆ ಮುನ್ನೆಲೆಗೆ ಬಂದಿದೆ. ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶಿಸಿದ್ದು, ಆದ್ರೆ, ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಆದರೂ ಸಹ ಸಹ ಪ್ರಯೋಜನವಾಗಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು (ಜುಲೈ 30) ತುರ್ತು ಸಭೆ ನಡೆಸಿ CWRC ಆದೇಶವನ್ನು ಎತ್ತಿ ಹಿಡಿದಿದ್ದು, 15 ದಿನ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ.
ಸಿಡಬ್ಲ್ಯೂಎಂಎ (CWMA) ಅಧ್ಯಕ್ಷ ಎಸ್. ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ CWMA ಮುಂದೆ ಸುದೀರ್ಘ ವಾದ ಮಂಡಿಸಿತ್ತು. ರಾಜ್ಯದ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟು, ಆದೇಶ ಮರುಪರಿಶೀಲಿಸುವಂತೆ ಮನವೊಲಿಸಲು ಯತ್ನಿಸಿತ್ತು. ಆದರೆ, ಕರ್ನಾಟಕದ ಮೇಲ್ಮನವಿಯನ್ನು ತಿರಸ್ಕರಿಸಿರುವ ಪ್ರಾಧಿಕಾರವು, CWRC ಶಿಫಾರಸ್ಸನ್ನೇ ಆದೇಶವಾಗಿ ಮಾರ್ಪಡಿಸಿದೆ.

