Linking Fraud: ಪಡಿತರ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅಮಾಯಕ ಮಹಿಳೆಯರನ್ನು ದೋಚಲಾರಂಭಿಸಿರುವ ಸೈಬರ್ ಸೆಂಟರ್ ಗಳು!

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 2:45 PM

ಮೂಲಗಳ ಲಿಂಕ್ ಮಾಡಲು ಸೈಬರ್ ಸೆಂಟರ್ ನವರು ಪ್ರತಿ ಮಹಿಳೆಯಿಂದ ರೂ. 250 ಪೀಕುತ್ತಿದ್ದಾರೆ.

ಕೋಲಾರ: ಇನ್ನು ಇಂಥದೆಲ್ಲ ಜಾಸ್ತಿ ನಡೆಯಲಿದೆ. ಕಾಂಗ್ರೆಸ್ ಪಕ್ಷ ಘೋಷಿಸಿರುವ ವಿವಿದ ಗ್ಯಾರಂಟಿಗಳ ಫಲಾನುಭವಿಗಳಾಗಲು (beneficiaries), ಪಡಿತರ ಕಾರ್ಡ್ ಗೆ (ration card) ಆಧಾರ್ ಕಾರ್ಡ್ (Aadhaar card) ಲಿಂಕ್ ಮಾಡಬೇಕು ಎಂಬ ವದಂತಿ ಕೆಜಿಎಫ್ ಪಟ್ಟಣದಲ್ಲಿ ಹಬ್ಬಿದೆ. ಹಾಗಾಗೇ, ಅಮಾಯಕ ಮಹಿಳೆಯರು ಆಧಾರ್ ಮತ್ತು ರೇಷನ್ ಕಾರ್ಡ್ ಗಳನ್ನು ಹಿಡಿದು, ಜಿರಾಕ್ಸ್ ಮತ್ತು ಸೈಬರ್ ಸೆಂಟರ್ ಗಳಿಗೆ ದಾಂಗುಡಿ ಇಡುತ್ತಿದ್ದಾರೆ. ಮೂಲಗಳ ಲಿಂಕ್ ಮಾಡಲು ಸೈಬರ್ ಸೆಂಟರ್ ನವರು ಪ್ರತಿ ಮಹಿಳೆಯಿಂದ ರೂ. 250 ಪೀಕುತ್ತಿದ್ದಾರೆ. ವಿಷಯ ಗೊತ್ತಾದ ಕೂಡಲೇ ಸ್ಥಳೀಯ ತಹಸೀಲ್ದಾರ್ ಶ್ರೀನಿವಾಸ ಅವರು ಪೊಲೀಸರೊಂದಿಗೆ ಸೈಬರ್ ಸೆಂಟರ್ ಗಳಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ ಮತ್ತು ಎಚ್ಚರಿಕೆಯನ್ನೂ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.