Cyclone Beeper Joy: ಗುಜರಾತ್ ಮಾಂಡವೀ ತೀರಕ್ಕೆ ಇಂದು ಅಪ್ಪಳಿಸಲಿದೆ ಬೀಪರ್ ಜಾಯ್ ಚಂಡಮಾರುತ, ಕರ್ನಾಟಕದ ಮೇಲೂ ಬೀರಲಿದೆ ಪ್ರಭಾವ

Updated on: Jun 15, 2023 | 10:48 AM

ಬೀಪರ್ ಜಾಯ್ ಸೈಕ್ಲೋನ್ ಮಹಾರಾಷ್ಟ್ರದ ಮುಂಬೈ, ವಲ್ಸಾಡ್ ಮತ್ತು ರತ್ನಗಿರಿ ಜಿಲ್ಲೆಗಳ ಮೇಲೂ ತನ್ನ ಪ್ರಭಾವ ಬೀರಲಿದೆ,

ಗುಜರಾತ್: ಬೀಪರ್ ಜಾಯ್ ಚಂಡಮಾರುತ (Beeper Joy Cyclone) ಗುರುವಾರ ಮಧ್ಯಾಹ್ನದ ನಂತರ ರಾಜ್ಯದ ಮಾಂಡವೀ ತೀರಕ್ಕೆ ಅಪ್ಪಳಿಸಲಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಕರಾವಳಿ ಪ್ರದೇಶಗಳಾಗಿರುವ (coastal regions) ಕಛ್, ಜುನಾಗಢ್, ದ್ವಾರಕಾ, ಪೋರ್ ಬಂದರ್, ಮಾಂಡವಿ, ಗಾಂಧಿನಗರ, ಮೊರ್ಬಿ, ಸೌರಾಷ್ಟ್ರಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಮತ್ತು ಸುಮಾರು 70,000 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಬೀಪರ್ ಜಾಯ್ ಸೈಕ್ಲೋನ್ ಮಹಾರಾಷ್ಟ್ರದ (Maharashtra) ಮುಂಬೈ, ವಲ್ಸಾಡ್ ಮತ್ತು ರತ್ನಗಿರಿ ಜಿಲ್ಲೆಗಳ ಮೇಲೂ ತನ್ನ ಪ್ರಭಾವ ಬೀರಲಿದೆ. ಚಂಡಮಾರುತದಿಂದಾಗಿ ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಹೇಳಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More