ಪೆಂಗಲ್ ಸೈಕ್ಲೋನ್ ಎಫೆಕ್ಟ್​​: ಬದಲಾದ ಅರಬ್ಬೀ ಸಮುದ್ರ ಬಣ್ಣ

Edited By: ವಿವೇಕ ಬಿರಾದಾರ

Updated on: Dec 03, 2024 | 2:26 PM

ಫೆಂಗಲ್ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳು ತೀವ್ರವಾಗಿ ಪ್ರಭಾವಿತವಾಗಿವೆ. ಬಲವಾದ ಗಾಳಿ ಮತ್ತು ಅಲೆಗಳಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮಂಗಳೂರಿನ ಹಲವು ಕಡಲು ಪ್ರದೇಶಗಳಲ್ಲಿ ಸಮುದ್ರದ ಬಣ್ಣ ಕೇಸರಿಯಾಗಿ ಬದಲಾಗಿದೆ. ಸೋಮೇಶ್ವರ, ಉಳ್ಳಾಲ, ಕೋಟೆಕಾರು ಮುಂತಾದ ಪ್ರದೇಶಗಳು ಹೆಚ್ಚು ಪರಿಣಾಮಕ್ಕೆ ಒಳಗಾಗಿವೆ.

‘ಪೆಂಗಲ್’ ಸೈಕ್ಲೋನ್ ಹಿನ್ನೆಲೆಯಲ್ಲಿ ದಕ್ಷಿಣ ಜಿಲ್ಲೆಯಲ್ಲಿ ಭಾರಿ ವೇಗವಾಗಿ ಗಾಳಿ ಬೀಸುತ್ತಿದೆ. ಗಾಳಿಯಿಂದ ಕಡಲು ಪ್ರಕ್ಷುಬ್ಧಗೊಂಡಿದೆ. ಮಂಗಳೂರಿನ ಉಳ್ಳಾಲ, ಸೋಮೇಶ್ವರ, ಕೋಟೆಕಾರು, ಉಚ್ಚಿಲ, ಬಟ್ಟಂಪಾಡಿ ಕಡಲು ಪ್ರಕ್ಷುಬ್ಧಗೊಂಡಿದೆ. ಸೋಮವಾರದವರೆಗು ನೀಲಿ ಬಣ್ಣವಿದ್ದ ಸಮುದ್ರ ಇಂದು ಕೇಸರಿ ಬಣ್ಣಕ್ಕೆ ತಿರುಗಿದೆ. ಅಂದಾಜು 200 ಮೀಟರ್ ಆಳದವರೆಗೂ ಸಮುದ್ರ ಕೇಸರಿ ಬಣ್ಣಕ್ಕೆ ತಿರುಗಿದೆ.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More