ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು; ಯಕ್ಷಗಾನ ರದ್ದು

Edited By:

Updated on: Dec 03, 2024 | 4:11 PM

ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೆ ಮಳೆ ನೀರು ನುಗ್ಗಿದೆ. ವೇಷಧಾರಿಗಳು ಬಣ್ಣ ಹಾಕುವ ಚೌಕಿ ಮನೆಯ ತುಂಬೆಲ್ಲ ನೀರು ತುಂಬಿದೆ. ಇದರಿಂದ ಸೋಮವಾರ ರಾತ್ರಿಯ ಬಹುತೇಕ ಯಕ್ಷಗಾನಗಳು ರದ್ದಾಗಿವೆ.

ಉಡುಪಿ: ಫೆಂಗಲ್ ಚಂಡಮಾರುತದ ಅಬ್ಬರದಿಂದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಯಕ್ಷಗಾನ ಮೇಳಗಳಿಗೂ ಸಮಸ್ಯೆ ಎದುರಾಗಿದೆ. ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೆ ಮಳೆ ನೀರು ನುಗ್ಗಿದೆ. ವೇಷಧಾರಿಗಳು ಬಣ್ಣ ಹಾಕುವ ಚೌಕಿ ಮನೆಯ ತುಂಬೆಲ್ಲ ನೀರು ತುಂಬಿದೆ. ಇದರಿಂದ ಸೋಮವಾರ ರಾತ್ರಿಯ ಬಹುತೇಕ ಯಕ್ಷಗಾನಗಳು ರದ್ದಾಗಿವೆ. ಚೌಕಿ ಮನೆಯ ಒಳಗೆ ಧಾರಾಕಾರ ಮಳೆ ನೀರು ಹರಿದು ಹೋಗುತ್ತಿದೆ. ಮಳೆಗಾಲ ಮುಗಿದ ನಂತರವೇ ಯಕ್ಷಗಾನ ಆರಂಭವಾಗುವುದು ಪ್ರತೀತಿ. ಆದರೆ, ಈ ಬಾರಿ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದೆ. ಇದರಿಂದ ಪ್ರದರ್ಶನಗಳು ರದ್ದಾದ ಕಾರಣ ಕಲಾವಿದರಿಗೆ ಪ್ರೇಕ್ಷಕರಿಗೆ ಬೇಸರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More