AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ ಛಿದ್ರ, ಇಬ್ಬಗೆ ಗಾಯ

ಆನೇಕಲ್: ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ ಛಿದ್ರ, ಇಬ್ಬಗೆ ಗಾಯ

ರಾಮು, ಆನೇಕಲ್​
| Edited By: |

Updated on: Jan 06, 2025 | 10:37 AM

Share

ರಾಜ್ಯದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತವೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಗ್ರಾಮ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕೇರಳ ಮೂಲದ ಇಬ್ಬರು ಗಾಯಗೊಂಡಿದ್ದಾರೆ. ಮನೆ ಗೋಡೆಗಳು, ಕಿಟಕಿ, ಬಾಗಿಲು ಸ್ಫೋಟದ ತೀವ್ರತೆಗೆ ಛಿದ್ರವಾಗಿವೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿವೆ. ಹೆಚ್ಚಿನ ವಿವರಗಳು ವಿಡಿಯೋದಲ್ಲಿವೆ.

ಆನೇಕಲ್, ಜನವರಿ 6: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ