ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​

Edited By:

Updated on: Apr 26, 2026 | 6:21 AM

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಇದು ಸಾಮಾನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ವರದಿ ಸಲ್ಲಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ. ಮತ್ತೊಂದೆಡೆ ಶಾಸಕ ಹೆಚ್.ಡಿ. ರಂಗನಾಥ್ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನದ ಒಡಂಬಡಿಕೆ ಪೂರ್ಣಗೊಳ್ಳುವ ಕುರಿತು ಮಾತನಾಡಿದ್ದು, ಹೈಕಮಾಂಡ್‌ನಿಂದ ದೊಡ್ಡ ಉಡುಗೊರೆ ನಿರೀಕ್ಷೆಯಿದೆ ಎಂದಿದ್ದಾರೆ.

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ ಸಲ್ಲಿಸುವುದು ನನ್ನ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us