ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ
ಸಿಎಂ ಡಿಕೆ ಶಿವಕುಮಾರ್ ಇಂದು ಕನಕಪುರ ಮತ್ತು ಹಾರೋಹಳ್ಳಿಯಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿ.ಎಂ. ಆದ ಬಳಿಕ ಸ್ವಕ್ಷೇತ್ರಕ್ಕೆ ಇದು ಅವರು ಮೊದಲ ಭಾರಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಜೀರೋ ಟ್ರಾಫಿಕ್ನಿಂದ ವಾಹನ ಸವಾರರಿಗೆ ತೊಂದರೆ ಹಿನ್ನೆಲೆ ಮೆಟ್ರೋದಲ್ಲಿ ಸಂಚರಿಸಲಿದ್ದಾರೆ.
ಬೆಂಗಳೂರು, ಜೂನ್ 07: ಸಿಎಂ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ. ವಿಧಾನಸೌಧದ ಮೆಟ್ರೋ ಸ್ಟೇಷನ್ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಸಿಎಂ ಪ್ರಯಾಣಿಸಲಿದ್ದಾರೆ. ಜೀರೋ ಟ್ರಾಫಿಕ್ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ. ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ತಮ್ಮ ಪ್ರವಾಸ ಮುಂದುವರೆಸಲಿದ್ದಾರೆ. ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ಕ್ಷೇತ್ರಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 07, 2026 09:17 AM
ಬೀದರ್ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್ಪಾಸ್ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್ಗೆ ಕರೆ!
