ಸಿಎಂ ಸ್ಥಾನಕ್ಕಾಗಿ ಸಚಿವರಿಗೆ ಬಿಗ್​ ಆಫರ್​ ಕೊಟ್ರಾ ಡಿ.ಕೆ. ಶಿವಕುಮಾರ್​?

Edited By:

Updated on: Nov 24, 2025 | 12:26 PM

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪಟ್ಟದ ಆಟ ಈಗ ಮತ್ತಷ್ಟು ಕುತೂಹಲಕಾರಿ ಘಟ್ಟ ತಲುಪಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ತಂತ್ರಗಾರಿಕೆಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯನ್ನು ಕರೆಯುವ ಸಂದರ್ಭ ಬಂದರೆ ಏನು ಮಾಡಬೇಕು ಎಂಬ ಪ್ಲ್ಯಾನ್​​ ಕೂಡ ಸಿದ್ಧವಾಗಿದ್ದು, ಮತ್ತೊಂದೆಡೆ ಹಾಲಿ ಮಂತ್ರಿಗಳಿಗೂ ಡಿಕೆಶಿ ಬಿಗ್​​ ಆಫರ್​ ಕೊಟ್ಟಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ನವೆಂಬರ್​​ 24: ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿರೋ ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರ ಸ್ಟ್ರಾಟಜಿ ಏನು ಎಂಬ Exclusive ಮಾಹಿತಿ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಸಿಎಲ್​ಪಿ ಸಭೆ ಕರೆದರೆ ಏನು ಮಾಡಬೇಕು ಎಂಬ ಬಗ್ಗೆಯೂ ಡಿಕೆಶಿ ಪ್ಲ್ಯಾನ್ ರೆಡಿಯಾಗಿದೆ. ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಂದ ಮತದಾನ ನಡೆದಿತ್ತು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪರ ಶಾಸಕರು ಮತ ಚಲಾಯಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಪಡೆದಿದ್ದರು. ಆದರೆ ಅಂದು ಬಹಿರಂಗವಾಗಿ ಮತದಾನ ನಡೆದಿದ್ದು, ಯಾವ ಶಾಸಕರು ಯಾರ ಪರ ಎಂಬುದು ಗೊತ್ತಾಗಿತ್ತು. ಹೀಗಾಗಿ ಈ ಬಾರಿ ಸ್ಥಿತಿ ಮತಕ್ಕೆ ಹಾಕುವ ಹಂತ ತಲುಪಿದರೆ CLP ನಾಯಕನ ಆಯ್ಕೆಗೆ ಗೌಪ್ಯ ಮತದಾನ ನಡೆಸುವಂತೆ ಪಟ್ಟು ಹಿಡಿಯಲು ಡಿಕೆಶಿ ಬಣ ಪ್ಲ್ಯಾನ್ ಮಾಡಿದೆ. ಗೌಪ್ಯ ಮತದಾನ ನಡೆದರೆ ಹೆಚ್ಚು ಶಾಸಕರ ಬೆಂಬಲದ ಲೆಕ್ಕಾಚಾರ ಇವರದ್ದಾಗಿದ್ದು,60ಕ್ಕೂ ಹೆಚ್ಚು ಶಾಸಕರ ಬೆಂಬಲ ಸಿಗಬಹುದೆಂಬ ನಿರೀಕ್ಷೆಯಲ್ಲಿ ಡಿಕೆಶಿ ಇದ್ದಾರೆ. ಹೀಗಾಗಿ ಒಬ್ಬೊಬ್ಬ ಶಾಸಕರನ್ನೂ ವಿಶ್ವಾಸಕ್ಕೆ ಪಡೆಯಲು ಯತ್ನ ನಡೆಸಿದ್ದು, ಸಚಿವರ ಪೈಕಿ ಹಲವರಿಗೆ ಸಚಿವ ಸ್ಥಾನ ಮುಂದುವರಿಕೆಯ ಆಫರ್ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 24, 2025 12:25 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More