AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್

ಮದನ್​ ಕುಮಾರ್​
|

Updated on: Jul 14, 2026 | 5:31 PM

Share

ಮುಖ್ಯಾಂಶಗಳು

  • ಪುನೀತ್ ರಾಜ್​ಕುಮಾರ್ ನಿಧನದಿಂದ ಚಿತ್ರರಂಗಕ್ಕೆ ನಷ್ಟ.
  • ದರ್ಶನ್ ಅವರು ಜೈಲು ಸೇರಿದ್ದು ಇನ್ನೊಂದು ಆಘಾತ.
  • ಈ ಘಟನೆಗಳ ಬಗ್ಗೆ ಮಾತಾಡಿದ್ದಾರೆ ಡಾಲಿ ಧನಂಜಯ.

‘ಮದರ್ ಪ್ರಾಮಿಸ್’ ಸಿನಿಮಾದ ನಟ, ನಿರ್ಮಾಪಕ ಡಾಲಿ ಧನಂಜಯ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಹಾಗೂ ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಟನಾಗಿ, ನಿರ್ಮಾಪಕನಾಗಿ ಡಾಲಿ ಧನಂಜಯ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಚಂದನವನ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಮತ್ತು ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಧನಂಜಯ (Daali Dhananjaya) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆ ಎರಡು ಘಟನೆಗಳು ದೊಡ್ಡ ಪೆಟ್ಟುಗಳು. ಪುನೀತ್ ರಾಜ್​ಕುಮಾರ್ ಮತ್ತು ದರ್ಶನ್ ಅವರು ಚಿತ್ರರಂಗದ ದೊಡ್ಡ ಮರಗಳು. ಒಂದು ವೇಳೆ ಟೈಮ್ ಟ್ರಾವೆಲ್ ಮಾಡುವ ಅವಕಾಶ ನನಗೆ ಸಿಕ್ಕರೆ ಆ ಎರಡು ಘಟನೆಗಳನ್ನು ನಾನು ತಡೆಯುತ್ತೇನೆ ಅಂತ ಸ್ನೇಹಿತರ ಬಳಿ ಆಗಾಗ ಹೇಳುತ್ತಿರುತ್ತೇನೆ. ಆ ಎರಡು ಘಟನೆಗಳು ಆಗಬಾರದಾಗಿತ್ತು. ಕೆಲವೊಂದನ್ನು ನಾವು ಬದಲಾಯಿಸೋಕೆ ಆಗಲ್ಲ. ಮುಂದಕ್ಕೆ ಏನು ಮಾಡಬಹುದು ಎಂಬುದು ಯೋಚನೆ ಮಾಡಬೇಕು’ ಎಂದು ಡಾಲಿ ಧನಂಜಯ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us