Daily Devotional: ಎಲ್ಲಿ ಮಾತನಾಡಬೇಕು, ಎಲ್ಲಿ ಸುಮ್ಮನಿರಬೇಕು ಗೊತ್ತಾ?

Updated on: Aug 14, 2025 | 6:58 AM

ಡಾ. ಬಸವರಾಜ ಗುರೂಜಿಯವರು ಇಂದಿನ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ, "ಮಾತು ಬೆಳ್ಳಿ, ಮೌನ ಬಂಗಾರ" ಎಂಬ ಗಾದೆಯ ಅರ್ಥವನ್ನು ವಿವರಿಸಿದ್ದಾರೆ. ಸಂದರ್ಭಾನುಸಾರವಾಗಿ ಮಾತನಾಡುವುದು ಮತ್ತು ಸೂಕ್ತ ಸಮಯದಲ್ಲಿ ಮೌನವಾಗಿರುವುದು ಜೀವನದಲ್ಲಿ ಯಶಸ್ಸು ಸಾಧಿಸಲು ಸಹಕಾರಿ. ಮೌನವು ಶಾಂತಿ, ತಾಳ್ಮೆ ಮತ್ತು ಸಹನೆಯನ್ನು ತರುತ್ತದೆ.

ಬೆಂಗಳೂರು, ಆಗಸ್ಟ್ 14: ಡಾ. ಬಸವರಾಜ ಗುರೂಜಿಯವರು ತಮ್ಮ ದೈನಂದಿನ ಭಕ್ತಿ ಕಾರ್ಯಕ್ರಮದಲ್ಲಿ “ಮಾತು ಬೆಳ್ಳಿ, ಮೌನ ಬಂಗಾರ” ಎಂಬ ಗಾದೆಯ ಮಹತ್ವವನ್ನು ವಿವರಿಸಿದ್ದಾರೆ. ಬೆಳ್ಳಿಯಂತೆ ಮಾತು ಅಮೂಲ್ಯ, ಆದರೆ ಅದನ್ನು ಸಂದರ್ಭಕ್ಕೆ ತಕ್ಕಂತೆ ಬಳಸಬೇಕು. ಅತಿಯಾದ ಮಾತು ತೊಂದರೆಗಳನ್ನು ಉಂಟುಮಾಡಬಹುದು. ಮೌನವು ಬಂಗಾರದಂತೆ ಅಮೂಲ್ಯ. ಅದು ಶಾಂತಿ, ತಾಳ್ಮೆ ಮತ್ತು ಸಹನೆಯನ್ನು ನೀಡುತ್ತದೆ. ಎಚ್ಚರಿಕೆಯ ಮಾತು ಮತ್ತು ನಡವಳಿಕೆಯು ಜೀವನದಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ಸಂತೋಷದಿಂದ, ತಾಳ್ಮೆಯಿಂದ ಮತ್ತು ನಗುಮುಖದಿಂದ ಮಾತನಾಡುವುದು ಮುಖ್ಯ ಎಂದಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More