Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ

Updated on: Jun 11, 2025 | 6:56 AM

ಡಾ. ಬಸವರಾಜ ಗುರೂಜಿ ಅವರು ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಪ್ರಾಮುಖ್ಯತೆಯನ್ನು ವಿವರಿಸಿದ್ದಾರೆ. ಪೂಜೆಯನ್ನು ಪ್ರಾರಂಭಿಸುವ ಮೊದಲು ಗಣಪತಿಯನ್ನು ಸ್ಮರಿಸುವುದು ಪೂಜೆಯನ್ನು ಪರಿಪೂರ್ಣಗೊಳಿಸುತ್ತದೆ ಎಂದು ಅವರು ಹೇಳುತ್ತಾರೆ. "ಶ್ರೀ ಗಣೇಶಾಯ ನಮಃ" ಮಂತ್ರವನ್ನು ಜಪಿಸುವುದು ಪೂಜೆಯ ಫಲವನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಜೂನ್​ 11: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವವನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಪೂಜೆ ಆರಂಭಿಸುವ ಮುನ್ನ ಗಣಪತಿಯನ್ನು ಸ್ಮರಿಸುವುದು ಅತ್ಯಂತ ಮುಖ್ಯ ಎಂದು ಅವರು ಹೇಳುತ್ತಾರೆ. ಮನೆ ದೇವರು ಅಥವಾ ಕುಲದೇವರ ಪೂಜೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದರೂ, ಗಣಪತಿ ಸ್ಮರಣೆಯಿಂದ ಪೂಜೆಯ ಪರಿಪೂರ್ಣತೆ ಹೆಚ್ಚಾಗುತ್ತದೆ. “ಶುಕ್ಲಾಂಬರಧರಂ” ಅಥವಾ ಇತರ ಶ್ಲೋಕಗಳ ಜೊತೆಗೆ “ಶ್ರೀ ಗಣೇಶಾಯ ನಮಃ” ಈ ಮಹಾಮಂತ್ರವನ್ನು ಜಪಿಸುವುದರಿಂದ ಪೂಜೆಯ ಫಲ ಹೆಚ್ಚಾಗುತ್ತದೆ. ವಿಡಿಯೋ ನೋಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More