Daily Devotional: ಕುಜ ದೋಷ ನಿವಾರಣೆಗೆ ಇದೊಂದು ಕೆಲಸ ಮಾಡಿ

Updated on: Apr 19, 2025 | 8:19 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಕುಜ ದೋಷ ನಿವಾರಣೆಗೆ ಏನು ಮಾಡಬೇಕು ಎಂಬ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಯಾವ ರಾಶಿಯವರು ಏನು ಮಾಡಿದರೆ ಕುಜ ದೋಷ ನಿವಾರಣೆಯಾಗಲಿದೆ ಎಂಬ ಬಗ್ಗೆ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಏಪ್ರಿಲ್​ 19: ಕುಜ ದೋಷವು ಜ್ಯೋತಿಷ್ಯ ಶಾಸ್ತ್ರದಲ್ಲಿ ಒಂದು ಪ್ರಮುಖ ಅಂಶವಾಗಿದೆ. ಇದು ಮಂಗಳ ಗ್ರಹದ (ಕುಜ) ಜಾತಕದಲ್ಲಿನ ಸ್ಥಾನ ಮತ್ತು ಅದರ ಪ್ರಭಾವವನ್ನು ಸೂಚಿಸುತ್ತದೆ. ಕುಜನು ಅಗ್ನಿ ತತ್ವದ ಗ್ರಹವಾಗಿದ್ದು, ಮೇಷ ಮತ್ತು ವೃಶ್ಚಿಕ ರಾಶಿಗಳ ಅಧಿಪತಿ. ಕುಜ ದೋಷವು ವಿವಾಹ, ಸಂತಾನ, ಆರೋಗ್ಯ ಮತ್ತು ಹಣಕಾಸಿನ ಮೇಲೆ ಪ್ರಭಾವ ಬೀರಬಹುದು ಎಂದು ನಂಬಲಾಗಿದೆ. ಕುಜ ದೋಷದಿಂದ ತಡವಾದ ವಿವಾಹ, ವಿವಾಹ ಸಂಬಂಧಿತ ಸಮಸ್ಯೆಗಳು, ಆರೋಗ್ಯ ಸಮಸ್ಯೆಗಳು, ಹಣಕಾಸಿನ ತೊಂದರೆಗಳು ಮತ್ತು ಸಂತಾನ ಸಮಸ್ಯೆಗಳು ಉಂಟಾಗಬಹುದು.

Published on: Apr 19, 2025 08:17 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More