AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Jul 25, 2025 | 7:01 AM

Share

ಡಾ. ಬಸವರಾಜ ಗುರೂಜಿಯವರು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಶ್ರೀ ಸೂಕ್ತದ ಮಹತ್ವವನ್ನು ವಿವರಿಸಿದ್ದಾರೆ. ಕ್ಷೀರಸಾಗರದಲ್ಲಿ ಲಕ್ಷ್ಮೀದೇವಿಯ ಉದ್ಭವದ ಸಂದರ್ಭದಲ್ಲಿ ಪಠಿಸಲ್ಪಟ್ಟ ಈ ಸ್ತೋತ್ರ, ದಾರಿದ್ರ್ಯ ನಾಶ, ಐಶ್ವರ್ಯ ವೃದ್ಧಿ, ಆರೋಗ್ಯ ಲಾಭಗಳನ್ನು ನೀಡುತ್ತದೆ. ಬೆಳಗ್ಗೆ ಅಥವಾ ಸಂಜೆ ಪಠಿಸುವುದರಿಂದ ಅನೇಕ ಫಲಗಳು ಸಿಗುತ್ತವೆ ಎಂದು ತಿಳಿಸಲಾಗಿದೆ.

ಬೆಂಗಳೂರು, ಜುಲೈ 25: ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿಯವರು ಶ್ರೀ ಸೂಕ್ತದ ಮಹತ್ವ ಮತ್ತು ಅದರ ಮೂಲವನ್ನು ವಿವರಿಸಿದ್ದಾರೆ. ಕ್ಷೀರಸಮುದ್ರದಲ್ಲಿ ಮಹಾಲಕ್ಷ್ಮಿಯ ಉದ್ಭವವಾದಾಗ ದೇವತೆಗಳು ಪಠಿಸಿದ ಸ್ತೋತ್ರವೇ ಶ್ರೀ ಸೂಕ್ತ. ಇದರಲ್ಲಿ ಲಕ್ಷ್ಮಿಯ ವಿವಿಧ ನಾಮಗಳನ್ನು ಉಲ್ಲೇಖಿಸಲಾಗಿದೆ. ಶ್ರೀ ಸೂಕ್ತವನ್ನು ಪ್ರತಿದಿನ ಬೆಳಗ್ಗೆ 5:30 ರಿಂದ 6:30 ರೊಳಗೆ ಅಥವಾ ಸಂಜೆ 6 ರಿಂದ 7:30 ರೊಳಗೆ ಪಠಿಸುವುದರಿಂದ ಆಸೆ ಆಕಾಂಕ್ಷೆಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ಇದನ್ನು 21 ದಿನಗಳ ಕಾಲ ನಿರಂತರವಾಗಿ ಪಠಿಸುವುದರಿಂದ ಐಶ್ವರ್ಯ ವೃದ್ಧಿ ಮತ್ತು ಸಾಲಬಾಧೆಗಳಿಂದ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More