Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ

Updated on: Jul 25, 2025 | 7:01 AM

ಡಾ. ಬಸವರಾಜ ಗುರೂಜಿಯವರು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಶ್ರೀ ಸೂಕ್ತದ ಮಹತ್ವವನ್ನು ವಿವರಿಸಿದ್ದಾರೆ. ಕ್ಷೀರಸಾಗರದಲ್ಲಿ ಲಕ್ಷ್ಮೀದೇವಿಯ ಉದ್ಭವದ ಸಂದರ್ಭದಲ್ಲಿ ಪಠಿಸಲ್ಪಟ್ಟ ಈ ಸ್ತೋತ್ರ, ದಾರಿದ್ರ್ಯ ನಾಶ, ಐಶ್ವರ್ಯ ವೃದ್ಧಿ, ಆರೋಗ್ಯ ಲಾಭಗಳನ್ನು ನೀಡುತ್ತದೆ. ಬೆಳಗ್ಗೆ ಅಥವಾ ಸಂಜೆ ಪಠಿಸುವುದರಿಂದ ಅನೇಕ ಫಲಗಳು ಸಿಗುತ್ತವೆ ಎಂದು ತಿಳಿಸಲಾಗಿದೆ.

ಬೆಂಗಳೂರು, ಜುಲೈ 25: ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿಯವರು ಶ್ರೀ ಸೂಕ್ತದ ಮಹತ್ವ ಮತ್ತು ಅದರ ಮೂಲವನ್ನು ವಿವರಿಸಿದ್ದಾರೆ. ಕ್ಷೀರಸಮುದ್ರದಲ್ಲಿ ಮಹಾಲಕ್ಷ್ಮಿಯ ಉದ್ಭವವಾದಾಗ ದೇವತೆಗಳು ಪಠಿಸಿದ ಸ್ತೋತ್ರವೇ ಶ್ರೀ ಸೂಕ್ತ. ಇದರಲ್ಲಿ ಲಕ್ಷ್ಮಿಯ ವಿವಿಧ ನಾಮಗಳನ್ನು ಉಲ್ಲೇಖಿಸಲಾಗಿದೆ. ಶ್ರೀ ಸೂಕ್ತವನ್ನು ಪ್ರತಿದಿನ ಬೆಳಗ್ಗೆ 5:30 ರಿಂದ 6:30 ರೊಳಗೆ ಅಥವಾ ಸಂಜೆ 6 ರಿಂದ 7:30 ರೊಳಗೆ ಪಠಿಸುವುದರಿಂದ ಆಸೆ ಆಕಾಂಕ್ಷೆಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ಇದನ್ನು 21 ದಿನಗಳ ಕಾಲ ನಿರಂತರವಾಗಿ ಪಠಿಸುವುದರಿಂದ ಐಶ್ವರ್ಯ ವೃದ್ಧಿ ಮತ್ತು ಸಾಲಬಾಧೆಗಳಿಂದ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More