AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Aug 23, 2025 | 7:02 AM

Share

ಶ್ರಾವಣ ಮಾಸದ ಅಮಾವಾಸ್ಯೆಯ ಪೂಜಾ ವಿಧಾನಗಳ ಕುರಿತು ಡಾ. ಬಸವರಾಜ ಗುರೂಜಿಯವರು ಈ ದೈನಂದಿನ ಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಅಮಾವಾಸ್ಯೆಯ ಮಹತ್ವ, ಪಿತೃಗಳ ಸ್ಮರಣೆ, ದೀಪಪೂಜೆ ಮತ್ತು ಮಹಾಲಕ್ಷ್ಮಿ ಅಷ್ಟೋತ್ತರ ಪಠಣದ ಪ್ರಾಮುಖ್ಯತೆ ಬಗ್ಗೆ ತಿಳಿಸಕೊಡಲಾಗಿದೆ. ಈ ಪೂಜೆಯಿಂದ ಧಾರ್ಮಿಕ ಲಾಭಗಳನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆಯೂ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಆಗಸ್ಟ್​​ 23: ಶ್ರಾವಣ ಮಾಸದ ಅಮಾವಾಸ್ಯೆಯ ಪೂಜಾ ವಿಧಿ-ವಿಧಾನಗಳ ಕುರಿತು ಡಾ. ಬಸವರಾಜ ಗುರೂಜಿಯವರು ಮಾರ್ಗದರ್ಶನ ನೀಡಿದ್ದಾರೆ. ಅಮಾವಾಸ್ಯೆಯು ಪಿತೃಗಳನ್ನು ಸ್ಮರಿಸುವ ಮತ್ತು ಅವರ ಆಶೀರ್ವಾದ ಪಡೆಯುವ ಪವಿತ್ರ ದಿನವಾಗಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರನು ಬರುವ ಸಮಯವಾಗಿರುವುದರಿಂದ ಇದಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅಮಾವಾಸ್ಯೆಯ ದಿನ ದೀಪ ಪೂಜೆ ಮಾಡುವುದು, ಮಹಾಲಕ್ಷ್ಮಿ ಅಷ್ಟೋತ್ತರ ಪಠಿಸುವುದು, ಮತ್ತು ಪಿತೃ ತರ್ಪಣ ಮಾಡುವುದು ಮುಂತಾದ ಕ್ರಿಯೆಗಳನ್ನು ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ ಎಂಬ ನಂಬಿಕೆ ಇದೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More